ರಾಜ್ಯ

ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ, ಸರ್ಕಾರ ಸಂಪೂರ್ಣ ವಿಫಲವಾಗಿದೆ: ಆರ್‌.ಅಶೋಕ

ಇದೇ ಮೊದಲ ಬಾರಿಗೆ ತನಿಖೆಗೆ ಅನುಮತಿ ನೀಡಲಾಗಿದೆ ಎಂಬಂತೆ ಸಿಎಂ ಸಿದ್ದರಾಮಯ್ಯ ವರ್ತನೆ

ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎಂದು ನಾವು ಹೇಳುತ್ತೇವೆ ಎಂದರು.

ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್‌ ಕಚೇರಿಯಾಗಿತ್ತೇ? ಕಾಂಗ್ರೆಸ್‌ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಹಿಂದೆ ನಿಂತಿರುವ ಬಂಡೆಯನ್ನು ತಳ್ಳುವ ಶಕ್ತಿ ನಮಗಿಲ್ಲ. 136 ಶಾಸಕರಿದ್ದಾರೆ ಎಂದು ಅಹಂಕಾರದಿಂದ ಮೆರೆಯುವ ಕಾಂಗ್ರೆಸ್‌ ನಾಯಕರು, ಈ ಸರ್ಕಾರವನ್ನು ಬಿಜೆಪಿ ಬೀಳಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. 136 ಶಾಸಕರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲ ಎಂಬುದು ಈ ಮೂಲಕ ಕಂಡುಬಂದಿದೆ ಎಂದರು.

ಎಲ್ಲರೂ ರಾಜೀನಾಮೆ ನೀಡಿ

ಪಕ್ಷದಿಂದ ಪ್ರತಿಭಟನೆ ಎನ್ನುವುದಾದರೆ ಎಲ್ಲ ಸಚಿವರು ರಾಜೀನಾಮೆ ನೀಡಿ ನಂತರ ಪ್ರತಿಭಟನೆ ಮಾಡಲಿ. ಇಲ್ಲಿ ಡಬಲ್‌ ಆಕ್ಟಿಂಗ್‌ ಮಾಡುವುದು ಬೇಡ. ರಾಜಭವನದ ದುರುಪಯೋಗ ಎನ್ನುವ ಆರೋಪ ಸವಕಲು ನಾಣ್ಯವಾಗಿದೆ. ಸಿದ್ದರಾಮಯ್ಯ ಅವರಿಗೆ ಭಯ ಏಕೆ? ಅವರ ರಕ್ಷಣೆಗೆ ನ್ಯಾಯಾಲಯವಿದೆ. ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್‌ ಚೇರ್‌ ನಡೆಯುತ್ತಿದ್ದು, ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಒಂದೊಂದು ಸಮುದಾಯದವರು ಒಂದೊಂದು ಕಡೆ ಆಹಾರದ ಮೇಳ ನಡೆಸುತ್ತಿದ್ದಾರೆ. ಎಲ್ಲರೂ ಸಿಎಂ ಕುರ್ಚಿಗೆ ಟವೆಲ್‌ ಹಾಕುತ್ತಿದ್ದಾರೆ. ಈ ಆಹಾರ ಮೇಳಗಳನ್ನು ಸಿಎಂ ಸಿದ್ದರಾಮಯ್ಯ ನಿಯಂತ್ರಿಸಲಿ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

52 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

54 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

56 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

58 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

1 hour ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

1 hour ago