ರಾಜ್ಯ

ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ, ಸರ್ಕಾರ ಸಂಪೂರ್ಣ ವಿಫಲವಾಗಿದೆ: ಆರ್‌.ಅಶೋಕ

ಇದೇ ಮೊದಲ ಬಾರಿಗೆ ತನಿಖೆಗೆ ಅನುಮತಿ ನೀಡಲಾಗಿದೆ ಎಂಬಂತೆ ಸಿಎಂ ಸಿದ್ದರಾಮಯ್ಯ ವರ್ತನೆ

ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎಂದು ನಾವು ಹೇಳುತ್ತೇವೆ ಎಂದರು.

ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್‌ ಕಚೇರಿಯಾಗಿತ್ತೇ? ಕಾಂಗ್ರೆಸ್‌ ನಾಯಕರು ಕಿವಿಯ ಮೇಲೆ ಹೂ ಇಡುವುದನ್ನು ಬಿಟ್ಟು, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಹಿಂದೆ ನಿಂತಿರುವ ಬಂಡೆಯನ್ನು ತಳ್ಳುವ ಶಕ್ತಿ ನಮಗಿಲ್ಲ. 136 ಶಾಸಕರಿದ್ದಾರೆ ಎಂದು ಅಹಂಕಾರದಿಂದ ಮೆರೆಯುವ ಕಾಂಗ್ರೆಸ್‌ ನಾಯಕರು, ಈ ಸರ್ಕಾರವನ್ನು ಬಿಜೆಪಿ ಬೀಳಿಸುತ್ತಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. 136 ಶಾಸಕರ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇಲ್ಲ ಎಂಬುದು ಈ ಮೂಲಕ ಕಂಡುಬಂದಿದೆ ಎಂದರು.

ಎಲ್ಲರೂ ರಾಜೀನಾಮೆ ನೀಡಿ

ಪಕ್ಷದಿಂದ ಪ್ರತಿಭಟನೆ ಎನ್ನುವುದಾದರೆ ಎಲ್ಲ ಸಚಿವರು ರಾಜೀನಾಮೆ ನೀಡಿ ನಂತರ ಪ್ರತಿಭಟನೆ ಮಾಡಲಿ. ಇಲ್ಲಿ ಡಬಲ್‌ ಆಕ್ಟಿಂಗ್‌ ಮಾಡುವುದು ಬೇಡ. ರಾಜಭವನದ ದುರುಪಯೋಗ ಎನ್ನುವ ಆರೋಪ ಸವಕಲು ನಾಣ್ಯವಾಗಿದೆ. ಸಿದ್ದರಾಮಯ್ಯ ಅವರಿಗೆ ಭಯ ಏಕೆ? ಅವರ ರಕ್ಷಣೆಗೆ ನ್ಯಾಯಾಲಯವಿದೆ. ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್‌ ಚೇರ್‌ ನಡೆಯುತ್ತಿದ್ದು, ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಒಂದೊಂದು ಸಮುದಾಯದವರು ಒಂದೊಂದು ಕಡೆ ಆಹಾರದ ಮೇಳ ನಡೆಸುತ್ತಿದ್ದಾರೆ. ಎಲ್ಲರೂ ಸಿಎಂ ಕುರ್ಚಿಗೆ ಟವೆಲ್‌ ಹಾಕುತ್ತಿದ್ದಾರೆ. ಈ ಆಹಾರ ಮೇಳಗಳನ್ನು ಸಿಎಂ ಸಿದ್ದರಾಮಯ್ಯ ನಿಯಂತ್ರಿಸಲಿ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

6 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

7 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

7 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

8 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

11 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

12 hours ago