ಬೆಂಗಳೂರು: ಮುಡಾ ಸೈಟ್ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣಗಳಿಂದ ಸದ್ಯ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್, ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ಜಂಟಿ ಹೋರಾಟದ ಬಗ್ಗೆ ನಿರ್ಧಾರ ಮಾಡಿವೆ.
ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿದ್ದಾರೆ ಎನ್ನಲಾದ ಮುಡಾ ಸೈಟ್ ಪ್ರಕರಣದ ಬಗ್ಗೆ ವಿಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು, ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಇದರ ಪ್ರಸ್ತಾಪಕ್ಕೆ ಭರ್ಜರಿ ಯೋಜನೆ ರೂಪಿಸಿವೆ.
ಈ ಕುರಿತು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಂದು ಸಭೆ ನಡೆಸಿ ಜಂಟಿ ಹೋರಾಟದ ಬಗ್ಗೆ ಸುದೀರ್ಘ ಸಮಯ ಚರ್ಚೆ ನಡೆಸಿದ್ದಾರೆ.
ಪ್ರಧಾನವಾಗಿ ಅಧಿವೇಶನದಲ್ಲಿ ಮುಡಾ ಸೈಟ್ ಪ್ರಕರಣ, ವಾಲ್ಮೀಕಿ ನಿಗಮದ ಹಗರಣವನ್ನು ತಾರ್ತಿಕ ಅಂತ್ಯದವರೆಗೂ ಮುಂದುವರಿಸಲು ನಿರ್ಧಾರ ಮಾಡಲಾಗಿದೆ. ಉಳಿದಂತೆ ಬೆಲೆ ಏರಿಕೆ, ಡೆಂಗ್ಯೂ, ಕಾನೂನು ಸುವ್ಯವಸ್ಥೆ ವಿಷಯಗಳನ್ನು ಆಯಾಯ ಸನ್ನಿವೇಶಕ್ಕೆ ತಕ್ಕಂತೆ ಪ್ರಸ್ತಾಪ ಮಾಡಲಿವೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…
ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…