ರಾಜ್ಯ

ವಿಧಾನಸಭಾ ಅಧಿವೇಶನದಲ್ಲಿ ಸದ್ದು ಮಾಡಲಿರುವ ಮುಡಾ ಹಾಗೂ ವಾಲ್ಮೀಕಿ ಹಗರಣ

ಬೆಂಗಳೂರು: ಮುಡಾ ಸೈಟ್‌ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣಗಳಿಂದ ಸದ್ಯ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌, ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ವಿಧಾನಸಭೆ ಮತ್ತು ವಿಧಾನಪರಿಷತ್‌ನಲ್ಲಿ ಜಂಟಿ ಹೋರಾಟದ ಬಗ್ಗೆ ನಿರ್ಧಾರ ಮಾಡಿವೆ.

ಸಿಎಂ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿದ್ದಾರೆ ಎನ್ನಲಾದ ಮುಡಾ ಸೈಟ್‌ ಪ್ರಕರಣದ ಬಗ್ಗೆ ವಿಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು, ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಇದರ ಪ್ರಸ್ತಾಪಕ್ಕೆ ಭರ್ಜರಿ ಯೋಜನೆ ರೂಪಿಸಿವೆ.

ಈ ಕುರಿತು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಇಂದು ಸಭೆ ನಡೆಸಿ ಜಂಟಿ ಹೋರಾಟದ ಬಗ್ಗೆ ಸುದೀರ್ಘ ಸಮಯ ಚರ್ಚೆ ನಡೆಸಿದ್ದಾರೆ.

ಪ್ರಧಾನವಾಗಿ ಅಧಿವೇಶನದಲ್ಲಿ ಮುಡಾ ಸೈಟ್‌ ಪ್ರಕರಣ, ವಾಲ್ಮೀಕಿ ನಿಗಮದ ಹಗರಣವನ್ನು ತಾರ್ತಿಕ ಅಂತ್ಯದವರೆಗೂ ಮುಂದುವರಿಸಲು ನಿರ್ಧಾರ ಮಾಡಲಾಗಿದೆ. ಉಳಿದಂತೆ ಬೆಲೆ ಏರಿಕೆ, ಡೆಂಗ್ಯೂ, ಕಾನೂನು ಸುವ್ಯವಸ್ಥೆ ವಿಷಯಗಳನ್ನು ಆಯಾಯ ಸನ್ನಿವೇಶಕ್ಕೆ ತಕ್ಕಂತೆ ಪ್ರಸ್ತಾಪ ಮಾಡಲಿವೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

14 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

15 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

21 hours ago