ಬೆಂಗಳೂರು : ಶುಕ್ರವಾರ ವಿಧಾನಸೌಧದ ಸಮ್ಮೇಳನದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ ಹಾಗೂ ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ. ಈ ವೇಳೆ ಅಧಿಕಾರಿ ಹಾಗೂ ಸಚಿವರುಗಳಿಗೆ ಮಧ್ಯಾಹ್ನ ಊಟದ ಬಿಡುವು 30 ನಿಮಿಷ ನೀಡಲಾಗಿತ್ತು. ಸರಿಯಾದ ಸಮಯಕ್ಕೆ ಸಿಎಂ ಖಡಕ್ ಎಂಟ್ರಿ ಕೊಟ್ಟರು. ಈ ವೇಳೆ ಅಧಿಕಾರಿಗಳು ಕಕ್ಕಾಬಿಕ್ಕಿಯಾದರು.
ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು.
ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30 ನಿಮಿಷಕ್ಕೆ ಸಮ್ಮೇಳನ ಸಭಾಂಗಣಕ್ಕೆ ಖಡಕ್ ಎಂಟ್ರಿ ಕೊಟ್ಟರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು, “ಸರ್ ಅಧಿಕಾರಿಗಳು ಇನ್ನೂ ಊಟಕ್ಕೆ ಹೋಗಿದ್ದಾರೆ ಸರ್, ಬರ್ತಾರೆ ಎಂದು ಸಮಾಧಾನಗೊಳಿಸಿದರು.
ಮುಖ್ಯಮಂತ್ರಿಗಳು ಸರಿಯಾದ ಸಮಯಕ್ಕೆ ಬಂದ ಸುದ್ದಿ ಕೇಳಿ ಬ್ಯಾಂಕ್ವೆಂಟ್ ಹಾಲ್ ನಲ್ಲಿದ್ದ ಅಧಿಕಾರಿಗಳು, ಸಚಿವರು ತಡಬಡಾಯಿಸಿ ದೌಡಾಯಿಸಿದರು.
ಊಟಕ್ಕೆ ಬಿಡುವು ಕೊಡುವಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು 45 ನಿಮಿಷ ಬಿಡುವು ಕೊಡೋಣ ಎಂದಿದ್ದರು. ಮುಖ್ಯಮಂತ್ರಿಗಳು ಅರ್ಧ ಗಂಟೆ ಸಾಕು ಎಂದು ಹೇಳಿದ್ದರು. ತಮ್ಮ ಸೂಚನೆಯಂತೆ ಮುಖ್ಯಮಂತ್ರಿಗಳು ಸರಿಯಾಗಿ 30 ನಿಮಿಷಕ್ಕೆ ಬಂದಿದ್ದು ಅಧಿಕಾರಿಗಳು, ಸಚಿವರನ್ನು ಕಕ್ಕಾಬಿಕ್ಕಿಯಾಗಿಸಿತು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…