ರಾಜ್ಯ

ವಿದ್ಯಾಸಿರಿ ವಿದ್ಯಾರ್ಥಿ ವೇತನ 2 ಸಾವಿರ ರೂ ಹೆಚ್ಚಳ : ಸಿಎಂ ಘೋಷಣೆ

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧ;

ಬೆಂಗಳೂರು : ಮಡಿವಾಳ (Madiwala) ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ (Congress Government) ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮಹತ್ವದ ಘೋಷಣೆ ಮಾಡಿದರು.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.

ಇದನ್ನೂ ಓದಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?

ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.

ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.

ಇದನ್ನೂ ಓದಿ:- ರಾಜ್ಯ ದಿವಾಳಿಯಾಗಿಲ್ಲ, ಆರ್ಥಿಕವಾಗಿ ಸದೃಢ : ಸಿಎಂ ಸಿದ್ದರಾಮಯ್ಯ

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

ಸಂವಿಧಾನ ವಿರೋಧಿಗಳನ್ನು ದೂರ ಇಡಿ
ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

6 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

7 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

9 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

9 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago