ರಾಜ್ಯ

ಮೈಸೂರಿನ ವಿಜಯ್‌ ಶಂಕರ್‌ ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ

ಮೈಸೂರು: ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್‌ ವಿಜಯ್‌ ಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇಲೆ ನೇಮಕ ಮಾಡಲಾಗಿದೆ.

ವಿಜಯ್‌ ಶಂಕರ್‌ ಅವರು 1988ರಲ್ಲಿ ಮೈಸೂರಿನಿಂದ ಆಯ್ಕೆಯಾಗಿ 12ನೇ ಲೋಕಸಭೆಗೆ ಪ್ರವೇಶಿಸಿದ್ದರು. ಬಳಿಕ 1994 ರಲ್ಲಿ ಹುಣಸೂರಿನಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿದ್ದರು, ಜತೆಗೆ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. ಇನ್ನೂ 2004 ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ 14ನೇ ಲೋಕಸಭೆಗೆ ಪ್ರವೇಶಿಸಿದ್ದರು. ಉಳಿದಂತೆ ಅವರನ್ನು 2010ರಲ್ಲಿ ಕರ್ನಾಟಕ ವಿಧಾನ ಪರಿಷತ್‌ಗೆ ಆಯ್ಕೆ ಮಾಡಲಾಗಿತ್ತು. 2016ರ ವರೆಗೂ ಎಂಎಲ್‌ಸಿಯಾಗಿ ಕಾರ್ಯನಿರ್ವಹಿಸಿದ್ದರು. 2017ರಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಮತ್ತೆ ಬಿಜೆಪಿಗೆ ಘರ್‌ ವಾಪ್ಸಿಯಾಗಿದ್ದರು.

ರಾಜ್ಯದ ಮಾಜಿ ಸಚಿವ ಈಗ ಮೇಘಲಯದ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಿರುವುದಕ್ಕೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ.

ಮೇಘಾಲಯ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಮಾಜಿ ಸಂಸದರು ಹಾಗೂ ಸರಳ ಸಜ್ಜನಿಕೆಯ ವ್ಯಕ್ತಿತ್ವದ ನಾಯಕರಾದ ಶ್ರೀ ಸಿ.ಹೆಚ್.ವಿಜಯಶಂಕರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಸಮಸ್ತ ಕನ್ನಡಿಗರ ಪರವಾಗಿ ವಿಜಯ ಶಂಕರ್ ಅವರಿಗೆ ಶುಭಾಶಯಗಳನ್ನು ಕೋರುತ್ತಾ, ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಅವರ ಹೆಜ್ಜೆಗಳು ನಿರಂತರವಾಗಿ ಸಾಗಲಿ. ಮೇಘಾಲಯದ ಜನರಿಗೆ ಅವರಿಂದ ಒಳ್ಳೆಯದಾಗಲಿ ಎಂದು ಮನಸಾರೆ ಆಶಿಸುತ್ತೇನೆ ಎಂದು ಎಕ್ಸ್‌ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

10 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

11 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

11 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

12 hours ago