ರಾಜ್ಯ

ಬೇಬಿಬೆಟ್ಟ ಜಾತ್ರಾ ಮಹೋತ್ಸವ: 24 ಜೋಡಿಗಳಿಗೆ ಮಾಂಗಲ್ಯ ವಿತರಿಸಿದ ವಿಜಯಲಕ್ಷ್ಮೀ ದರ್ಶನ್‌

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸರಳ ಸಾಮೂಹಿಕ ವಿವಾಹದಲ್ಲಿ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭಾಗವಹಿಸಿ 24 ನವ ಜೋಡಿಗಳಿಗೆ ಮಾಂಗಲ್ಯ ವಿತರಿಸಿ ಶುಭಕೋರಿದ್ದಾರೆ.

ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯುತ್ತದೆ. ಅಂತೆಯೇ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು(ಮಾರ್ಚ್.‌2) ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಸರಳ ಸಾಮೂಹಿಕ ವಿವಾಹ ನಡೆಯಿತು. ಅದರಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ವಿಜಯಲಕ್ಷ್ಮೀ ದರ್ಶನ್‌ ಅವರು ಮಾಂಗಲ್ಯ ವಿತರಣೆ ಮಾಡಿದರು. ಅಲ್ಲದೇ ಈ ಎಲ್ಲಾ ಜೋಡಿಗಳಿಗೆ ನಟ ಧನ್ವೀರ್ ಅವರು ವಾಚ್ ವಿತರಣೆ ಮಾಡಿದರೆ, ಹಾಸ್ಯನಟ ಚಿಕ್ಕಣ್ಣ ಅವರು ಸೀರೆ, ಪಂಚೆ ಮತ್ತು ಶರ್ಟ್ ವಿತರಿಸಿದ್ದಾರೆ.

ಇನ್ನೂ ಶ್ರೀರಾಮಾಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಬೆಳಿಗ್ಗೆ 10.10 ಗಂಟೆಗೆ ಶುಭಲಗ್ನದಲ್ಲಿ ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಂಗಲ್ಯಧಾರಣೆ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಹಸ್ರಾರು ಸಂಖ್ಯೆಯ ಜನತೆ ಅಕ್ಷತೆ ಹಾಕುವ ಮೂಲಕ ವಧು-ವರರಿಗೆ ಆಶೀರ್ವಾದಿಸಿದ್ದಾರೆ.

ಇದೇ ಸಂದರ್ಭದಲ್ಲಿ ವಿಜಯಲಕ್ಷ್ಮೀ ಅವರು ಮಾತನಾಡಿ, ಸರಳ ಸಾಮೂಹಿಕ ವಿವಾಹದಲ್ಲಿ ಭಾಗಿಯಾಗಿ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ಒಳ್ಳೆಯ ನಿರ್ಧಾರ. ಈ ವೇಳೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳ ಜೀವನ ಸುಖ, ನೆಮ್ಮದಿ ದೊರಕಲಿ ಹಾಗೂ ರೈತರು ಮತ್ತು ರೈತರ ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

3 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

3 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

4 hours ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

4 hours ago