ರಾಜ್ಯ

ಬೇಬಿಬೆಟ್ಟ ಜಾತ್ರಾ ಮಹೋತ್ಸವ: 24 ಜೋಡಿಗಳಿಗೆ ಮಾಂಗಲ್ಯ ವಿತರಿಸಿದ ವಿಜಯಲಕ್ಷ್ಮೀ ದರ್ಶನ್‌

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸರಳ ಸಾಮೂಹಿಕ ವಿವಾಹದಲ್ಲಿ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭಾಗವಹಿಸಿ 24 ನವ ಜೋಡಿಗಳಿಗೆ ಮಾಂಗಲ್ಯ ವಿತರಿಸಿ ಶುಭಕೋರಿದ್ದಾರೆ.

ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯುತ್ತದೆ. ಅಂತೆಯೇ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು(ಮಾರ್ಚ್.‌2) ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಸರಳ ಸಾಮೂಹಿಕ ವಿವಾಹ ನಡೆಯಿತು. ಅದರಲ್ಲಿ 24 ಮಂದಿ ನವ ವಧು-ವರರು ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ನವಜೋಡಿಗೆ ವಿಜಯಲಕ್ಷ್ಮೀ ದರ್ಶನ್‌ ಅವರು ಮಾಂಗಲ್ಯ ವಿತರಣೆ ಮಾಡಿದರು. ಅಲ್ಲದೇ ಈ ಎಲ್ಲಾ ಜೋಡಿಗಳಿಗೆ ನಟ ಧನ್ವೀರ್ ಅವರು ವಾಚ್ ವಿತರಣೆ ಮಾಡಿದರೆ, ಹಾಸ್ಯನಟ ಚಿಕ್ಕಣ್ಣ ಅವರು ಸೀರೆ, ಪಂಚೆ ಮತ್ತು ಶರ್ಟ್ ವಿತರಿಸಿದ್ದಾರೆ.

ಇನ್ನೂ ಶ್ರೀರಾಮಾಯೋಗೇಶ್ವರ ಮಠದ ಪೀಠಾಧ್ಯಕ್ಷ ಶ್ರೀ ಶಿವಬಸವಸ್ವಾಮೀಜಿ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಬೆಳಿಗ್ಗೆ 10.10 ಗಂಟೆಗೆ ಶುಭಲಗ್ನದಲ್ಲಿ ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಂಗಲ್ಯಧಾರಣೆ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಹಸ್ರಾರು ಸಂಖ್ಯೆಯ ಜನತೆ ಅಕ್ಷತೆ ಹಾಕುವ ಮೂಲಕ ವಧು-ವರರಿಗೆ ಆಶೀರ್ವಾದಿಸಿದ್ದಾರೆ.

ಇದೇ ಸಂದರ್ಭದಲ್ಲಿ ವಿಜಯಲಕ್ಷ್ಮೀ ಅವರು ಮಾತನಾಡಿ, ಸರಳ ಸಾಮೂಹಿಕ ವಿವಾಹದಲ್ಲಿ ಭಾಗಿಯಾಗಿ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ಒಳ್ಳೆಯ ನಿರ್ಧಾರ. ಈ ವೇಳೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳ ಜೀವನ ಸುಖ, ನೆಮ್ಮದಿ ದೊರಕಲಿ ಹಾಗೂ ರೈತರು ಮತ್ತು ರೈತರ ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

12 mins ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

26 mins ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

2 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

4 hours ago

ಬಾಲ್ಯದ ಗೆಳೆಯನಿಗೆ ಡಿಕೆಶಿ ‘ಉಡುಗೊರೆ’ : ರಾಜಕೀಯಕ್ಕೆ ರವಿಚಂದ್ರನ್?

ಸಿಎಂ ಭೇಟಿಯಾಗಿ ಚರ್ಚೆ ; ಖಚಿತಪಡಿಸದ ಕಾಂಗ್ರೆಸ್ ನಾಯಕರು ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕ್ರೇಜಿಸ್ಟಾರ್…

4 hours ago

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

6 hours ago