ರಾಜ್ಯ

ನೀಟ್‌ ಫಲಿತಾಂಶ : ವಿಜಯಪುರದ ನಿಖಿಲ ಸೊನ್ನದ ರಾಜ್ಯಕ್ಕೆ ಪ್ರಥಮ

ವಿಜಯಪುರ : ಮಂಗಳೂರು ವಳಚಿಲ್‌ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್‌ ಸೊನ್ನದ ಅವರು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ನಡೆದ ನೀಟ್‌(ರಾಷ್ಟ್ರೀಯ ಪ್ರವೇಶ ಪರೀಕ್ಷೆ)ನಲ್ಲಿ ರಾಷ್ಟಕ್ಕೆ 17ನೇ ರ‍್ಯಾಂಕ್‌ ಹಾಗೂ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿದ್ದಾರೆ.

ಇವರು ವಿಜಯಪುರದ ಸಂಜೀವಿನಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ದಂಪತಿ ಡಾ.ಸಿದ್ದಪ್ಪ ಸೊನ್ನದ ಮತ್ತು ಡಾ.ಮೀನಾಕ್ಷಿ ಸೊನ್ನದ ಅವರ ಪುತ್ರರಾಗಿದ್ದಾರೆ.

ನಿಖಿಲ್‌ ಸೊನ್ನದ ಅವರು 720ಅಂಕಗಳಿಗೆ 670 ಅಂಕ ಗಳಿಸಿದ್ದಾರೆ.

ನೀಟ್‌ನಲ್ಲಿ ಉತ್ತಮ ಅಂಕದ ನಿರೀಕ್ಷೆ ಇತ್ತು. ಆದರೆ, ರಾಷ್ಟ್ರಮಟ್ಟದಲ್ಲಿ 17 ನೇ ಸ್ಥಾನ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಹಳ ಖುಷಿಯಾಗಿದೆ. ಏಮ್ಸ್‌ನಲ್ಲಿ ಪದವಿ ಓದಬೇಕೆಂದುಕೊಂಡಿರುವೆ. ನರರೋಗ ಶಸ್ತ್ರಚಿಕಿತ್ಸಕ ಆಗಬೇಕು ಎಂಬ ನನ್ನ ಆಶಯವಾಗಿದೆ. ನಮ್ಮ ಕಾಲೇಜಿ ಧ್ಯೇಯ ವಾಕ್ಯವಾದ ಶ್ರಮದೇವ ಜಯತೇ ಎಂಬುದು ನನ್ನನ್ನು ಪ್ರತಿದಿನ ಕಠಿಣ ಶ್ರಮ ಹಾಕಲು ಪ್ರೇರೇಪಣೆ ನೀಡಿತು. ಪ್ರತಿದಿನಿ ಬೆಳಿಗ್ಗೆ 7 ರಿಂದ ಸಂಜೆ 7ರ ತನಕ ತರಗತಿ ಹಾಗೂ ನೀಟ್‌ ಕೋಚಿಂಗ್‌ ಇರುತ್ತಿತ್ತು. ಕಾಲೇಜಿನ ಉಪನ್ಯಾಸಕರು ನಮಗೆ ಉತ್ತೇಜನ ನೀಡುತ್ತಿದ್ದರು ಎಂದು ನಿಖಿಲ್‌ ಸೊನ್ನದ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

52 mins ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

1 hour ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

3 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

3 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

4 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

4 hours ago