ರಾಜ್ಯ

ನೀಟ್‌ ಫಲಿತಾಂಶ : ವಿಜಯಪುರದ ನಿಖಿಲ ಸೊನ್ನದ ರಾಜ್ಯಕ್ಕೆ ಪ್ರಥಮ

ವಿಜಯಪುರ : ಮಂಗಳೂರು ವಳಚಿಲ್‌ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್‌ ಸೊನ್ನದ ಅವರು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕೆ ನಡೆದ ನೀಟ್‌(ರಾಷ್ಟ್ರೀಯ ಪ್ರವೇಶ ಪರೀಕ್ಷೆ)ನಲ್ಲಿ ರಾಷ್ಟಕ್ಕೆ 17ನೇ ರ‍್ಯಾಂಕ್‌ ಹಾಗೂ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿದ್ದಾರೆ.

ಇವರು ವಿಜಯಪುರದ ಸಂಜೀವಿನಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯ ದಂಪತಿ ಡಾ.ಸಿದ್ದಪ್ಪ ಸೊನ್ನದ ಮತ್ತು ಡಾ.ಮೀನಾಕ್ಷಿ ಸೊನ್ನದ ಅವರ ಪುತ್ರರಾಗಿದ್ದಾರೆ.

ನಿಖಿಲ್‌ ಸೊನ್ನದ ಅವರು 720ಅಂಕಗಳಿಗೆ 670 ಅಂಕ ಗಳಿಸಿದ್ದಾರೆ.

ನೀಟ್‌ನಲ್ಲಿ ಉತ್ತಮ ಅಂಕದ ನಿರೀಕ್ಷೆ ಇತ್ತು. ಆದರೆ, ರಾಷ್ಟ್ರಮಟ್ಟದಲ್ಲಿ 17 ನೇ ಸ್ಥಾನ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಹಳ ಖುಷಿಯಾಗಿದೆ. ಏಮ್ಸ್‌ನಲ್ಲಿ ಪದವಿ ಓದಬೇಕೆಂದುಕೊಂಡಿರುವೆ. ನರರೋಗ ಶಸ್ತ್ರಚಿಕಿತ್ಸಕ ಆಗಬೇಕು ಎಂಬ ನನ್ನ ಆಶಯವಾಗಿದೆ. ನಮ್ಮ ಕಾಲೇಜಿ ಧ್ಯೇಯ ವಾಕ್ಯವಾದ ಶ್ರಮದೇವ ಜಯತೇ ಎಂಬುದು ನನ್ನನ್ನು ಪ್ರತಿದಿನ ಕಠಿಣ ಶ್ರಮ ಹಾಕಲು ಪ್ರೇರೇಪಣೆ ನೀಡಿತು. ಪ್ರತಿದಿನಿ ಬೆಳಿಗ್ಗೆ 7 ರಿಂದ ಸಂಜೆ 7ರ ತನಕ ತರಗತಿ ಹಾಗೂ ನೀಟ್‌ ಕೋಚಿಂಗ್‌ ಇರುತ್ತಿತ್ತು. ಕಾಲೇಜಿನ ಉಪನ್ಯಾಸಕರು ನಮಗೆ ಉತ್ತೇಜನ ನೀಡುತ್ತಿದ್ದರು ಎಂದು ನಿಖಿಲ್‌ ಸೊನ್ನದ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

8 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

9 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

9 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

9 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

9 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

9 hours ago