ರಾಜ್ಯ

ಸಿಎಂ ಸಿದ್ದರಾಮಯ್ಯ ಪಾಪದ ಕೊಡ ತುಂಬಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬಳ್ಳಾರಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಲೂಟಿ ಮಾಡಿದ ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಚುನಾವಣೆಯಲ್ಲಿ ಹೆಂಡ ಖರೀದಿಗೆ ಬಳಸಲಾಗಿದೆ. ಈ ಬಗ್ಗೆ ಜಾರಿ ನಿರ್ದೇಶನಾಲಯವೇ ಹೇಳಿದೆ.

ಈ ಎಲ್ಲಾ ಹಗರಣಗಳನ್ನು ಒಪ್ಪಿಕೊಂಡು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ರಾಜ್ಯದ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರು ನಿಮ್ಮ ಮೇಲೆ ವಿಶ್ವಾಸವಿಟ್ಟು 136 ಸ್ಥಾನ ನೀಡಿದರು. ಅವರ ಹಣವನ್ನೇ ತಿಂದು ಅವರಿಗೇ ಅನ್ಯಾಯ ಮಾಡಿದ್ದೀರಿ. ನಿಮ್ಮ ಪಾಪದ ಕೊಡ ತುಂಬಿದೆ. ಮೈಸೂರಿನ ಮುಡಾ ಹಗರಣ ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದೀರಿ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಭ್ರಷ್ಟಾಚಾರದ ವಿರುದ್ಧ ಬಿಜೆಪಿಯವರು ಸುಮ್ಮನೆ ಕೂರಲ್ಲ ಅಂತಾ ಗೊತ್ತಾಗಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ತೀವ್ರ ಆತಂಕದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

32 mins ago

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆ: ಆತಂಕದಲ್ಲಿ ರೈತರು

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…

53 mins ago

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ…

54 mins ago

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು: ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ…

1 hour ago

ಹನೂರು: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗೆ ಮುಂದುವರೆದ ಚಿಕಿತ್ಸೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ…

1 hour ago

ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ರಣ ಬಿಸಿಲು

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲಿ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರುನಾಡು ಬಿಸಿಲ ಧಗೆಗೆ ಬಳಲಿ…

2 hours ago