ದಾವಣಗೆರೆ: ಬಿಜೆಪಿಯಲ್ಲಿ ಮುಂದಿನ ಸಿಎಂ ಕುರಿತು ಬಹಿರಂಗವಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಲೇ ಬಂದಿವೆ.
ಹೀಗಿರುವಾಗ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ ಎಂ.ಪಿ.ರೇಣುಕಾಚಾರ್ಯ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ರೇಣುಕಾಚಾರ್ಯ ಅವರು, ಮುಂದಿನ ಸಿಎಂ ವಿಜಯೇಂದ್ರ ಅವರು ಎಂದು ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಿಂದ ನಾವು ಸಂದೇಶ ಕೊಡುತ್ತೇವೆ. ಯಾವುದೇ ದುಷ್ಟ ಶಕ್ತಿ ಬಂದರೂ ಇದನ್ನು ತಡೆಯೋಕೆ ಆಗಲ್ಲ. ವಿಜಯೇಂದ್ರ ಅವರನ್ನು ಮುಂದಿನ ಸಿಎಂ ಆಗಿ ಮಾಡೇ ಮಾಡುತ್ತೇವೆ ಎಂದು ಘೋಷಣೆ ಮಾಡಿದರು.
ಇನ್ನು ಉಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ ಯಾವುದೇ ದಿಕ್ಸೂಚಿ ಅಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಣ, ಹೆಂಡ ಹಂಚಿ ಗೆದ್ದಿದೆ ಎಂದು ಆರೋಪಿಸಿದರು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…