ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದ್ದು, ಹೈನುಗಾರಿಕೆ ಮತ್ತು ಪಶುಸಂಗೋಪನೆ ಅವಲಂಬಿಸಿರುಬ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತರಿಗೆ ನೀಡಬೇಕಿರುವ ಕ್ಷೀರಧಾರೆಗೆ ಹಣವಿಲ್ಲ. ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕನ್ನೂ ಹಸನಾಗಿಸಲಿಲ್ಲ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಇಲ್ಲಿಯವರೆಗೂ ರಾಜ್ಯದ ರೈತರಿಗೆ ಸುಮಾರು 606.69 ಕೋಟಿ ರೂಪಾಯಿಗೂ ಅಧಿಕ ಹಾಲಿನ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ. ಇದಕ್ಕೆ ಹಣಕಾಸಿನ ಕೊರತೆಯೇ ನೇರ ಕಾರಣ ಎಂದು ಸ್ವತಃ ಪಶುಸಂಗೋಪನಾ ಸಚಿವರೇ ಸದನದಲ್ಲಿ ತಿಳಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೊಕ್ಕಸ ಬರಿದಾಗಿಸಿಕೊಂಡು ದಿವಾಳಿ ಅಂಚಿಗೆ ತಲುಪಿರುವುದನ್ನು ಸಾಕ್ಷೀಕರಿಸುತ್ತಿದೆ ಎಂದು ಟೀಕಿಸಿದ್ದಾರೆ.
ಓಲೈಕೆ ರಾಜಕಾರಣಕ್ಕಾಗಿ ಶೋಷಿತರು ಹಾಗೂ ಹಿಂದುಳಿದವರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಂಡಿರುವ ಕಾಂಗ್ರೆಸ್ ಸರ್ಕಾರದಲ್ಲಿ, ರೈತರಿಗೆ ನೀಡಬೇಕಾದ ಪ್ರೋತ್ಸಾಹ ಧನವನ್ನು ಮತ್ಯಾವ ಓಲೈಕೆಗೆ ಬಳಸಿಕೊಂಡಿದೆಯೋ ತಿಳಿಯದು. ಅಭಿವೃದ್ಧಿ ಶೂನ್ಯ ಆಡಳಿತದ ಮೂಲಕ ರೈತರ ಶ್ರೇಯೋಭಿವೃದ್ಧಿಯೆಡೆಗೆ ಒಂದೇ ಒಂದು ಹೆಜ್ಜೆ ಇಡದ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ. ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಸಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…