ರಾಜ್ಯ

ವಿಜಯೇಂದ್ರ ಪರ ಬಣ ಸಭೆ ಪ್ರಾರಂಭ: ಸುಮಾರು 40ಕ್ಕೂ ಅಧಿಕ ನಾಯಕರು ಭಾಗಿ

ದಾವಣಗೆರೆ: ಇಲ್ಲಿನ ಸಾಯಿ ಇಂಟರ್‌ ನ್ಯಾಷನಲ್‌ ಹೋಟೆಲ್‌ನಲ್ಲಿ ಬಿಜೆಪಿ ಪಕ್ಷದ ಸಭೆಗಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರವೆಂದು ಗುರುತಿಸಿಕೊಂಡಿರುವ ಬಣದ ಸುಮಾರು 40ಕ್ಕೂ ಅಧಿಕ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.15) ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಹರತಾಳು ಹಾಲಪ್ಪ, ಸೋಮಶೇಖರ ರೆಡ್ಡಿ, ಎಸ್.ಎ.ರವೀಂದ್ರನಾಥ್‌ ಹಾಗೂ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿದಂತೆ ಸುಮಾರು 40ಕ್ಕೂ ಅಧಿಕ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ದಾವಣಗೆರೆ ಸಮಾವೇಶ ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಬಿಜೆಪಿ ರಾಜ್ಯ ಘಟಕದ ಆಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಬಣಗಳ ಮಧ್ಯೆ ಇರುವ ಮುನಿಸು ಹೈಕಮಾಂಡ್‌ನ ಮಧ್ಯಪ್ರವೇಶದಿಂದ ತಣ್ಣಾಗಾಗಿದೆ ಎನ್ನುವ ಬೆನ್ನಲ್ಲೇ ಇಂದು
ದಾವಣಗೆರೆಯಲ್ಲಿ ಸೇರಿರುವ ಈ ಸಭೆ ಕುತೂಹಲ ಮೂಡಿಸಿದೆ. ವಿಜಯೇಂದ್ರ ಪರವಾಗಿ ಮಧ್ಯ ಕರ್ನಾಟಕದಲ್ಲಿ ಶಕ್ತಿ ಪ್ರದರ್ಶನದ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ಸಭೆಗೆ ಹಾಜರಾಗಲು ಶನಿವಾರ(ಡಿ.14) ರಾತ್ರಿ ವೇಳೆಯೇ ಅನೇಕ ನಾಯಕರು ಆಗಮಿಸಿದ್ದರೆ, ಇನ್ನೂ ಕೆಲವು ನಾಯಕರು ಇಂದು ಬೆಳಿಗ್ಗೆ ಆಗಮಿಸಿದ್ದಾರೆ. ಬಳಿಕ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಅರ್ಚನ ಎಸ್‌ ಎಸ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

4 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

4 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

4 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

4 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

4 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

4 hours ago