ರಾಜ್ಯ

ವಿಜಯೇಂದ್ರ ಪರ ಬಣ ಸಭೆ ಪ್ರಾರಂಭ: ಸುಮಾರು 40ಕ್ಕೂ ಅಧಿಕ ನಾಯಕರು ಭಾಗಿ

ದಾವಣಗೆರೆ: ಇಲ್ಲಿನ ಸಾಯಿ ಇಂಟರ್‌ ನ್ಯಾಷನಲ್‌ ಹೋಟೆಲ್‌ನಲ್ಲಿ ಬಿಜೆಪಿ ಪಕ್ಷದ ಸಭೆಗಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರವೆಂದು ಗುರುತಿಸಿಕೊಂಡಿರುವ ಬಣದ ಸುಮಾರು 40ಕ್ಕೂ ಅಧಿಕ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.15) ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾ ಸುಬ್ರಮಣ್ಯ ನಾಯ್ಡು, ಹರತಾಳು ಹಾಲಪ್ಪ, ಸೋಮಶೇಖರ ರೆಡ್ಡಿ, ಎಸ್.ಎ.ರವೀಂದ್ರನಾಥ್‌ ಹಾಗೂ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿದಂತೆ ಸುಮಾರು 40ಕ್ಕೂ ಅಧಿಕ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ದಾವಣಗೆರೆ ಸಮಾವೇಶ ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಬಿಜೆಪಿ ರಾಜ್ಯ ಘಟಕದ ಆಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಬಣಗಳ ಮಧ್ಯೆ ಇರುವ ಮುನಿಸು ಹೈಕಮಾಂಡ್‌ನ ಮಧ್ಯಪ್ರವೇಶದಿಂದ ತಣ್ಣಾಗಾಗಿದೆ ಎನ್ನುವ ಬೆನ್ನಲ್ಲೇ ಇಂದು
ದಾವಣಗೆರೆಯಲ್ಲಿ ಸೇರಿರುವ ಈ ಸಭೆ ಕುತೂಹಲ ಮೂಡಿಸಿದೆ. ವಿಜಯೇಂದ್ರ ಪರವಾಗಿ ಮಧ್ಯ ಕರ್ನಾಟಕದಲ್ಲಿ ಶಕ್ತಿ ಪ್ರದರ್ಶನದ ವಿಚಾರವಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಈ ಸಭೆಗೆ ಹಾಜರಾಗಲು ಶನಿವಾರ(ಡಿ.14) ರಾತ್ರಿ ವೇಳೆಯೇ ಅನೇಕ ನಾಯಕರು ಆಗಮಿಸಿದ್ದರೆ, ಇನ್ನೂ ಕೆಲವು ನಾಯಕರು ಇಂದು ಬೆಳಿಗ್ಗೆ ಆಗಮಿಸಿದ್ದಾರೆ. ಬಳಿಕ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಅರ್ಚನ ಎಸ್‌ ಎಸ್

Recent Posts

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

56 mins ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

5 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

5 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

5 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

5 hours ago