ಬೆಂಗಳೂರು: ಶಾಸಕ ಯತ್ನಾಳ್ ಅವರು ಯಾವ ಶುಭ ಮುಹೂರ್ತಕ್ಕೆ ಕಾಯದೇ ನನ್ನ ವಿರುದ್ಧ ಯಾವುದೇ ದಾಖಲೆ ಅಥವಾ ವಿಡಿಯೋಗಳಿದ್ದರೆ ತಕ್ಷಣವೇ ಬಿಡುಗಡೆ ಮಾಡಲಿ ಎಂದು ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲ್ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿ.1) ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ತಮ್ಮ ಬಣದೊಂದಿಗೆ ಸಮಾಲೋಚನೆ ನಡೆಸಿ ಯತ್ನಾಳ್ ಅವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವ ಅವಶ್ಯಕತೆಯಿಲ್ಲ. ಆದರೆ ಯತ್ನಾಳ್ ಅವರು ಹೊಂದಾಣಿಕೆ ರಾಜಕಾರಣ ಎಂದು ಪಕ್ಷದ ಸಂಘಟನೆಗೆ ಪೆಟ್ಟು ನೀಡುತ್ತಿದ್ದಾರೆ ಎಂದಿದ್ದಾರೆ.
ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆಯಾಗಲಿ ಎಂದು ಬಯಸುತ್ತಿದ್ದಾರೆ. ಈ ಬಗ್ಗೆ ಅವರೊಂದಿಗೆ ಇನ್ನೂ ಹತ್ತು ಮಂದಿ ಸೇರಿಕೊಳ್ಳಲಿ ನಾನು ಅದಕ್ಕೆಲ್ಲಾ ತಲೆ ಕಡೆಸಿಕೊಳ್ಳಲ್ಲ. ಆದರೆ ಯತ್ನಾಳ್ ವಿರುದ್ಧ ಬಿಗು ಕ್ರಮವಾಗಬೇಕೆಂಬುದು ಅಷ್ಟೇ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಹೀಗಾಗಿ ನಾನು ಈಗಲೂ ಯತ್ನಾಳ್ ಅವರಿಗೆ ಮನವಿ ಮಾಡುವುದೆಂದರೆ ಪಕ್ಷದ ಕಾರ್ಯಕರ್ತರಿಗೆ ಯಾವುದೇ ರೀತಿಯ ಅವಮಾನವಾಗದಂತೆ ನಡೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಬೈಯೋದು ಒಂದೇ ಪದವಿ ಎಂದು ಯತ್ನಾಳ್ ಅಂದುಕೊಂಡಿದ್ದಾರೆ ಎಂದು ಮಾಜಿ ಶಾಸಕರು ತಿಳಿಸಿದ್ದಾರೆ. ಆದರೆ ನಾನು ಅವರೆಲ್ಲರಿಗೂ ಅದನ್ನು ಬದಿಗೊತ್ತಿ ಪಕ್ಷದ ಸಂಘಟನೆಗೆ ಕೆಲಸ ಮಾಡಿ ಎಂದಷ್ಟೇ ಹೇಳಿದ್ದೇನೆ. ಶಾಸಕ ಯತ್ನಾಳ್ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ಗೆ ಚಾಡಿ ಹೇಳುವ ಅಥವಾ ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಹೇಳಿಲ್ಲ, ಹೇಳುವ ಯಾವ ಅವಶ್ಯಕತೆಯೂ ಇಲ್ಲ ಎಂದು ತಿಳಿಸಿದ್ದಾರೆ.
ಶಾಸಕ ಯತ್ನಾಳ್ ನೀಡಿರುವ ಹೇಳಿಕೆ ಏನು?
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆ ನನ್ನ ಬಳಿ ಸಾಕ್ಷ್ಯಾಧಾರವಿದೆ. ಅದನ್ನು ನಾನು ಬಿಡುಗಡೆ ಮಾಡಲಾ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…
ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…
ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…