ಬೆಂಗಳೂರು: ಶಾಸಕ ಯತ್ನಾಳ್ ಅವರು ಯಾವ ಶುಭ ಮುಹೂರ್ತಕ್ಕೆ ಕಾಯದೇ ನನ್ನ ವಿರುದ್ಧ ಯಾವುದೇ ದಾಖಲೆ ಅಥವಾ ವಿಡಿಯೋಗಳಿದ್ದರೆ ತಕ್ಷಣವೇ ಬಿಡುಗಡೆ ಮಾಡಲಿ ಎಂದು ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲ್ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಡಿ.1) ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ತಮ್ಮ ಬಣದೊಂದಿಗೆ ಸಮಾಲೋಚನೆ ನಡೆಸಿ ಯತ್ನಾಳ್ ಅವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವ ಅವಶ್ಯಕತೆಯಿಲ್ಲ. ಆದರೆ ಯತ್ನಾಳ್ ಅವರು ಹೊಂದಾಣಿಕೆ ರಾಜಕಾರಣ ಎಂದು ಪಕ್ಷದ ಸಂಘಟನೆಗೆ ಪೆಟ್ಟು ನೀಡುತ್ತಿದ್ದಾರೆ ಎಂದಿದ್ದಾರೆ.
ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆಯಾಗಲಿ ಎಂದು ಬಯಸುತ್ತಿದ್ದಾರೆ. ಈ ಬಗ್ಗೆ ಅವರೊಂದಿಗೆ ಇನ್ನೂ ಹತ್ತು ಮಂದಿ ಸೇರಿಕೊಳ್ಳಲಿ ನಾನು ಅದಕ್ಕೆಲ್ಲಾ ತಲೆ ಕಡೆಸಿಕೊಳ್ಳಲ್ಲ. ಆದರೆ ಯತ್ನಾಳ್ ವಿರುದ್ಧ ಬಿಗು ಕ್ರಮವಾಗಬೇಕೆಂಬುದು ಅಷ್ಟೇ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಹೀಗಾಗಿ ನಾನು ಈಗಲೂ ಯತ್ನಾಳ್ ಅವರಿಗೆ ಮನವಿ ಮಾಡುವುದೆಂದರೆ ಪಕ್ಷದ ಕಾರ್ಯಕರ್ತರಿಗೆ ಯಾವುದೇ ರೀತಿಯ ಅವಮಾನವಾಗದಂತೆ ನಡೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ ಬೈಯೋದು ಒಂದೇ ಪದವಿ ಎಂದು ಯತ್ನಾಳ್ ಅಂದುಕೊಂಡಿದ್ದಾರೆ ಎಂದು ಮಾಜಿ ಶಾಸಕರು ತಿಳಿಸಿದ್ದಾರೆ. ಆದರೆ ನಾನು ಅವರೆಲ್ಲರಿಗೂ ಅದನ್ನು ಬದಿಗೊತ್ತಿ ಪಕ್ಷದ ಸಂಘಟನೆಗೆ ಕೆಲಸ ಮಾಡಿ ಎಂದಷ್ಟೇ ಹೇಳಿದ್ದೇನೆ. ಶಾಸಕ ಯತ್ನಾಳ್ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ಗೆ ಚಾಡಿ ಹೇಳುವ ಅಥವಾ ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಹೇಳಿಲ್ಲ, ಹೇಳುವ ಯಾವ ಅವಶ್ಯಕತೆಯೂ ಇಲ್ಲ ಎಂದು ತಿಳಿಸಿದ್ದಾರೆ.
ಶಾಸಕ ಯತ್ನಾಳ್ ನೀಡಿರುವ ಹೇಳಿಕೆ ಏನು?
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆ ನನ್ನ ಬಳಿ ಸಾಕ್ಷ್ಯಾಧಾರವಿದೆ. ಅದನ್ನು ನಾನು ಬಿಡುಗಡೆ ಮಾಡಲಾ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…