ರಾಜ್ಯ

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ವಿಜಯೇಂದ್ರ ಮತ್ತು ಟೀಂ

ಮಂಗಳೂರು: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ.

ಇಂದು ಬೆಳ್ಳಂಬೆಳಿಗ್ಗೆಯೇ ವಿಜಯೇಂದ್ರ, ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್‌, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್‌ ಬ್ರಿಜೇಶ್‌ ಚೌಟಾ, ಹರೀಶ್‌ ಪೂಂಜಾ, ಪ್ರತಾಪ್‌ ಸಿಂಹ ನಾಯಕ್‌ ಸೇರಿದಂತೆ ಹಲವರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ.

ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನೆ ಮಾಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದಾಗ ಬಿಜೆಪಿ ಸ್ವಾಗತ ಮಾಡಿದೆ. ತನಿಖೆ ಪಾರದರ್ಶಕವಾಗಿ ಆಗಬೇಕು. ಹುಟ್ಟಿರುವ ಅನುಮಾನಗಳು ಇತ್ಯರ್ಥ ಆಗಬೇಕು ಎಂದು ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದೆವು ಎಂದರು.

ತನಿಖೆ ನಡೆಯುವ ವೇಳೆ ಅನೇಕ ಗೊಂದಗಲಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಅಪಪ್ರಚಾರದ ಬಗ್ಗೆ ಕಡಿವಾಣ ಹಾಕುವ ಕೆಲಸ ಆಗಬೇಕು. ಆದರೆ ಸರ್ಕಾರ ಕಡಿವಾಣ ಹಾಕದೇ ಅಪಚಾರ ಎಸಗಿದೆ. ಕಡಿವಾಣ ಹಾಕದ ಸಿಎಂ ಈ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

24 mins ago

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…

40 mins ago

ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ವಹಿಸಿ : ಅರಣ್ಯಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…

51 mins ago

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…

58 mins ago

ಮೈಸೂರಿನ ಒರಿಜಿನಲ್‌ ಮೈಲಾರಿ ಹೋಟೆಲ್‌ ಇದೀಗ ಬೆಂಗಳೂರಲ್ಲೂ ಲಭ್ಯ

ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…

1 hour ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

3 hours ago