bjp vijayendra
ಮಂಗಳೂರು: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ.
ಇಂದು ಬೆಳ್ಳಂಬೆಳಿಗ್ಗೆಯೇ ವಿಜಯೇಂದ್ರ, ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಹಲವರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ.
ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ರವಾನೆ ಮಾಡಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿದಾಗ ಬಿಜೆಪಿ ಸ್ವಾಗತ ಮಾಡಿದೆ. ತನಿಖೆ ಪಾರದರ್ಶಕವಾಗಿ ಆಗಬೇಕು. ಹುಟ್ಟಿರುವ ಅನುಮಾನಗಳು ಇತ್ಯರ್ಥ ಆಗಬೇಕು ಎಂದು ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದೆವು ಎಂದರು.
ತನಿಖೆ ನಡೆಯುವ ವೇಳೆ ಅನೇಕ ಗೊಂದಗಲಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಅಪಪ್ರಚಾರದ ಬಗ್ಗೆ ಕಡಿವಾಣ ಹಾಕುವ ಕೆಲಸ ಆಗಬೇಕು. ಆದರೆ ಸರ್ಕಾರ ಕಡಿವಾಣ ಹಾಕದೇ ಅಪಚಾರ ಎಸಗಿದೆ. ಕಡಿವಾಣ ಹಾಕದ ಸಿಎಂ ಈ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…
ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…