ಬೆಂಗಳೂರು: ರಾಜ್ಯ ಸರ್ಕಾರ ಕೊಡಗಿನ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಸಿ.ಬಿ.ಐ ವರ್ಗಾಯಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಕೇಂದ್ರ ತನಿಖಾ ದಳ (ಸಿ.ಬಿ.ಐ) ವರ್ಗಾಯಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
ಶಾಸಕರಾದ ಮಂಥರ್ ಗೌಡ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಬಲಾಢ್ಯರು ಹಾಗೂ ಆಡಳಿತಾರೂಡಿ ಕಾಂಗ್ರೆಸ್ ಸರ್ಕಾರದಲ್ಲಿರುವುದರಿಂದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಎಫ್.ಐ.ಆರ್ ನಲ್ಲಿ ಶಾಸಕದ್ವಯರ ಹೆಸರನ್ನು ಉಲ್ಲೇಖ ಮಾಡದೆ ಪೊಲೀಸರು ಪರೋಕ್ಷವಾಗಿ ತನಿಖೆ ಆರಂಭ ಆಗುವ ಮುನ್ನವೇ prime suspect ಗಳಿಗೆ ದೋಷ ಮುಕ್ತಗೊಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದಿವಂಗತ ಕಾರ್ಯಕರ್ತ ವಿನಯ್ ಅವರ ಕುಟುಂಬಷ್ಟರು ನೀಡಿರುವ ದೂರರ್ಜಿಯ ವಿಷಯದಲ್ಲೇ ಶಾಸಕರ ಪಾತ್ರ ಉಲ್ಲೇಖಿತವಾಗಿದೆ. ಬಡವರಿಗೆ ಒಂದು ನ್ಯಾಯ, ಅಧಿಕಾರಸ್ಥರಿಗೆ ಒಂದು ನ್ಯಾಯ ಆಗಬಾರದು. ಕಾರ್ಯಕರ್ತರು ಪಕ್ಷದ ಸೇನಾನಿಗಳು ಅವರನ್ನು ರಕ್ಷಿಸಬೇಕಾದದ್ದು ಪಕ್ಷದ ಕರ್ತವ್ಯ ಎಂದಿದ್ದಾರೆ.
ಸಮಯವನ್ನು ವ್ಯರ್ಥ ಮಾಡದೆ ಕೂಡಲೇ ಪ್ರಕರಣವನ್ನು ಸಿ.ಬಿ.ಐಗೆ ನೀಡಿದರೆ ಪ್ರಕರಣ ತಾರ್ಕಿಕ ಅಂತ್ಯ ಕಾಣಬಹುದು ಇಲ್ಲದಿದ್ದರೆ ತನಿಖೆಯಲ್ಲಿ ಕೆಲ ‘ಪ್ರಭಾವಿ’ ಗಳು ಹಸ್ತಕ್ಷೇಪ ಮಾಡುವ ಮೂಲಕ, ಸಾಕ್ಷ್ಯಾಧಾರಗಳನ್ನು ನಾಶ ಮಾಡುವ ಮೂಲಕ ಮುಚ್ಚಿಹಾಕುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…