ರಾಜ್ಯ

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ| ಸಿಬಿಐ ತನಿಖೆಗೆ ಆಗ್ರಹಿಸಿದ ಯತ್ನಾಳ್‌

ಬೆಂಗಳೂರು: ರಾಜ್ಯ ಸರ್ಕಾರ ಕೊಡಗಿನ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಸಿ.ಬಿ.ಐ ವರ್ಗಾಯಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಕೇಂದ್ರ ತನಿಖಾ ದಳ (ಸಿ.ಬಿ.ಐ) ವರ್ಗಾಯಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಶಾಸಕರಾದ ಮಂಥರ್ ಗೌಡ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಬಲಾಢ್ಯರು ಹಾಗೂ ಆಡಳಿತಾರೂಡಿ ಕಾಂಗ್ರೆಸ್ ಸರ್ಕಾರದಲ್ಲಿರುವುದರಿಂದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಎಫ್.ಐ.ಆರ್ ನಲ್ಲಿ ಶಾಸಕದ್ವಯರ ಹೆಸರನ್ನು ಉಲ್ಲೇಖ ಮಾಡದೆ ಪೊಲೀಸರು ಪರೋಕ್ಷವಾಗಿ ತನಿಖೆ ಆರಂಭ ಆಗುವ ಮುನ್ನವೇ prime suspect ಗಳಿಗೆ ದೋಷ ಮುಕ್ತಗೊಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದಿವಂಗತ ಕಾರ್ಯಕರ್ತ ವಿನಯ್ ಅವರ ಕುಟುಂಬಷ್ಟರು ನೀಡಿರುವ ದೂರರ್ಜಿಯ ವಿಷಯದಲ್ಲೇ ಶಾಸಕರ ಪಾತ್ರ ಉಲ್ಲೇಖಿತವಾಗಿದೆ. ಬಡವರಿಗೆ ಒಂದು ನ್ಯಾಯ, ಅಧಿಕಾರಸ್ಥರಿಗೆ ಒಂದು ನ್ಯಾಯ ಆಗಬಾರದು. ಕಾರ್ಯಕರ್ತರು ಪಕ್ಷದ ಸೇನಾನಿಗಳು ಅವರನ್ನು ರಕ್ಷಿಸಬೇಕಾದದ್ದು ಪಕ್ಷದ ಕರ್ತವ್ಯ ಎಂದಿದ್ದಾರೆ.

ಸಮಯವನ್ನು ವ್ಯರ್ಥ ಮಾಡದೆ ಕೂಡಲೇ ಪ್ರಕರಣವನ್ನು ಸಿ.ಬಿ.ಐಗೆ ನೀಡಿದರೆ ಪ್ರಕರಣ ತಾರ್ಕಿಕ ಅಂತ್ಯ ಕಾಣಬಹುದು ಇಲ್ಲದಿದ್ದರೆ ತನಿಖೆಯಲ್ಲಿ ಕೆಲ ‘ಪ್ರಭಾವಿ’ ಗಳು ಹಸ್ತಕ್ಷೇಪ ಮಾಡುವ ಮೂಲಕ, ಸಾಕ್ಷ್ಯಾಧಾರಗಳನ್ನು ನಾಶ ಮಾಡುವ ಮೂಲಕ ಮುಚ್ಚಿಹಾಕುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

35 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

46 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 hours ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

2 hours ago