ರಾಜ್ಯ

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ| ಸಿಬಿಐ ತನಿಖೆಗೆ ಆಗ್ರಹಿಸಿದ ಯತ್ನಾಳ್‌

ಬೆಂಗಳೂರು: ರಾಜ್ಯ ಸರ್ಕಾರ ಕೊಡಗಿನ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಸಿ.ಬಿ.ಐ ವರ್ಗಾಯಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಕೇಂದ್ರ ತನಿಖಾ ದಳ (ಸಿ.ಬಿ.ಐ) ವರ್ಗಾಯಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಶಾಸಕರಾದ ಮಂಥರ್ ಗೌಡ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಬಲಾಢ್ಯರು ಹಾಗೂ ಆಡಳಿತಾರೂಡಿ ಕಾಂಗ್ರೆಸ್ ಸರ್ಕಾರದಲ್ಲಿರುವುದರಿಂದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಎಫ್.ಐ.ಆರ್ ನಲ್ಲಿ ಶಾಸಕದ್ವಯರ ಹೆಸರನ್ನು ಉಲ್ಲೇಖ ಮಾಡದೆ ಪೊಲೀಸರು ಪರೋಕ್ಷವಾಗಿ ತನಿಖೆ ಆರಂಭ ಆಗುವ ಮುನ್ನವೇ prime suspect ಗಳಿಗೆ ದೋಷ ಮುಕ್ತಗೊಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದಿವಂಗತ ಕಾರ್ಯಕರ್ತ ವಿನಯ್ ಅವರ ಕುಟುಂಬಷ್ಟರು ನೀಡಿರುವ ದೂರರ್ಜಿಯ ವಿಷಯದಲ್ಲೇ ಶಾಸಕರ ಪಾತ್ರ ಉಲ್ಲೇಖಿತವಾಗಿದೆ. ಬಡವರಿಗೆ ಒಂದು ನ್ಯಾಯ, ಅಧಿಕಾರಸ್ಥರಿಗೆ ಒಂದು ನ್ಯಾಯ ಆಗಬಾರದು. ಕಾರ್ಯಕರ್ತರು ಪಕ್ಷದ ಸೇನಾನಿಗಳು ಅವರನ್ನು ರಕ್ಷಿಸಬೇಕಾದದ್ದು ಪಕ್ಷದ ಕರ್ತವ್ಯ ಎಂದಿದ್ದಾರೆ.

ಸಮಯವನ್ನು ವ್ಯರ್ಥ ಮಾಡದೆ ಕೂಡಲೇ ಪ್ರಕರಣವನ್ನು ಸಿ.ಬಿ.ಐಗೆ ನೀಡಿದರೆ ಪ್ರಕರಣ ತಾರ್ಕಿಕ ಅಂತ್ಯ ಕಾಣಬಹುದು ಇಲ್ಲದಿದ್ದರೆ ತನಿಖೆಯಲ್ಲಿ ಕೆಲ ‘ಪ್ರಭಾವಿ’ ಗಳು ಹಸ್ತಕ್ಷೇಪ ಮಾಡುವ ಮೂಲಕ, ಸಾಕ್ಷ್ಯಾಧಾರಗಳನ್ನು ನಾಶ ಮಾಡುವ ಮೂಲಕ ಮುಚ್ಚಿಹಾಕುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago