ಬೆಂಗಳೂರು: ರಾಜ್ಯ ಸರ್ಕಾರ ಕೊಡಗಿನ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಸಿ.ಬಿ.ಐ ವರ್ಗಾಯಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದುಷ್ಟ ಶಕ್ತಿಗಳು ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಕೇಂದ್ರ ತನಿಖಾ ದಳ (ಸಿ.ಬಿ.ಐ) ವರ್ಗಾಯಿಸಬೇಕೆಂದು ಆಗ್ರಹಿಸುತ್ತೇನೆ ಎಂದಿದ್ದಾರೆ.
ಶಾಸಕರಾದ ಮಂಥರ್ ಗೌಡ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಬಲಾಢ್ಯರು ಹಾಗೂ ಆಡಳಿತಾರೂಡಿ ಕಾಂಗ್ರೆಸ್ ಸರ್ಕಾರದಲ್ಲಿರುವುದರಿಂದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಎಫ್.ಐ.ಆರ್ ನಲ್ಲಿ ಶಾಸಕದ್ವಯರ ಹೆಸರನ್ನು ಉಲ್ಲೇಖ ಮಾಡದೆ ಪೊಲೀಸರು ಪರೋಕ್ಷವಾಗಿ ತನಿಖೆ ಆರಂಭ ಆಗುವ ಮುನ್ನವೇ prime suspect ಗಳಿಗೆ ದೋಷ ಮುಕ್ತಗೊಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದಿವಂಗತ ಕಾರ್ಯಕರ್ತ ವಿನಯ್ ಅವರ ಕುಟುಂಬಷ್ಟರು ನೀಡಿರುವ ದೂರರ್ಜಿಯ ವಿಷಯದಲ್ಲೇ ಶಾಸಕರ ಪಾತ್ರ ಉಲ್ಲೇಖಿತವಾಗಿದೆ. ಬಡವರಿಗೆ ಒಂದು ನ್ಯಾಯ, ಅಧಿಕಾರಸ್ಥರಿಗೆ ಒಂದು ನ್ಯಾಯ ಆಗಬಾರದು. ಕಾರ್ಯಕರ್ತರು ಪಕ್ಷದ ಸೇನಾನಿಗಳು ಅವರನ್ನು ರಕ್ಷಿಸಬೇಕಾದದ್ದು ಪಕ್ಷದ ಕರ್ತವ್ಯ ಎಂದಿದ್ದಾರೆ.
ಸಮಯವನ್ನು ವ್ಯರ್ಥ ಮಾಡದೆ ಕೂಡಲೇ ಪ್ರಕರಣವನ್ನು ಸಿ.ಬಿ.ಐಗೆ ನೀಡಿದರೆ ಪ್ರಕರಣ ತಾರ್ಕಿಕ ಅಂತ್ಯ ಕಾಣಬಹುದು ಇಲ್ಲದಿದ್ದರೆ ತನಿಖೆಯಲ್ಲಿ ಕೆಲ ‘ಪ್ರಭಾವಿ’ ಗಳು ಹಸ್ತಕ್ಷೇಪ ಮಾಡುವ ಮೂಲಕ, ಸಾಕ್ಷ್ಯಾಧಾರಗಳನ್ನು ನಾಶ ಮಾಡುವ ಮೂಲಕ ಮುಚ್ಚಿಹಾಕುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದ್ದಾರೆ.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…