ರಾಜ್ಯ

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆ : ಕಠಿಣ ಕ್ರಮ

ಬೆಂಗಳೂರು : ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ.

ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ
ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900 ಮೌಲ್ಯದ ಬಯೋಸ್ಟಿಮುಲೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿಯಾದ ವಸ್ತುಗಳು & ಮೌಲ್ಯ:
GROW-R: ₹58,000
ABDA Gold: ₹1,52,000
Zymegold: ₹30,800
ಸಾಗರಿಕಾ: ₹23,100
ಶಿವರಿಕಾ: ₹2,66,000

ನಂಜನಗೂಡಿನಲ್ಲಿ ಅನಧಿಕೃತ ಕೀಟನಾಶಕ ಜಪ್ತಿ
ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕರಾದ ದೇವರಾಜು ಮಾರ್ಗದರ್ಶನದಲ್ಲಿ, ಶ್ರೀ ಇಂಡಸ್ಟ್ರೀಸ್, ನಂಜನಗೂಡಿನಲ್ಲಿ ಅನಧಿಕೃತವಾಗಿ ತಯಾರಿಸಲಾಗುತ್ತಿದ್ದ 160 ಲೀಟರ್ ಪ್ರೊಫೆನೊಫಾಸ್ ಕೀಟನಾಶಕವನ್ನು ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆಯಲ್ಲಿ ಲೈಸೆನ್ಸ್ ರದ್ದು ಮತ್ತು ಅಮಾನತು
ದಾವಣಗೆರೆಯ ADA (ವಿಜಿಲೆನ್ಸ್ 1 & 2) ಶಿಫಾರಸಿನ ಮೇರೆಗೆ, ದಾವಣಗೆರೆಯ 5 ಚಿಲ್ಲರೆ ಮಾರಾಟಗಾರರು ಮತ್ತು ಜಗಳೂರಿನ 2 ಚಿಲ್ಲರೆ ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿಡಲಾಗಿದೆ. ರಸಗೊಬ್ಬರವನ್ನು ನಿಗದಿತ ಬೆಲೆ (MRP)ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಚಿಲ್ಲರೆ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಹಾಗೆಯೇ, ರಸಗೊಬ್ಬರ ಸಗಟು ಮಾರಾಟಗಾರರು ಜಿಲ್ಲೆಯ ಚಿಲ್ಲರೆ ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಪೂರೈಕೆ ಮಾಡದೆ, ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದರಿಂದ, ಈ ಕೆಳಗಿನ ಸಗಟು ಮಾರಾಟಗಾರರ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ:

ಆಶಾಪೂರಿ ಫರ್ಟಿಲೈಸರ್ಸ್, ದಾವಣಗೆರೆ
ರಾಥೋಡ್ ಫರ್ಟಿಲೈಸರ್ಸ್, ದಾವಣಗೆರೆ
ಶ್ರೀ ಮಲ್ಲಿಕಾರ್ಜುನ ಫರ್ಟಿಲೈಸರ್ಸ್, ದಾವಣಗೆರೆ
ದಿಬ್ಬದಹಳ್ಳಿ ಆಗ್ರೋ ಸರ್ವೀಸ್, ದಾವಣಗೆರೆ
ಶ್ರೀ ಶ್ರೀನಿವಾಸ ಆಗ್ರೋ ಟ್ರೇಡರ್ಸ್, ದಾವಣಗೆರೆ
ಕಿಶೋರ್ ಫರ್ಟಿಲೈಸರ್ಸ್, ದಾವಣಗೆರೆ
ವೀರಭದ್ರೇಶ್ವರ ಫರ್ಟಿಲೈಸರ್ಸ್, ನಲ್ಲೂರು, ಚನ್ನಗಿರಿ ತಾಲೂಕು
ವೀರಭದ್ರೇಶ್ವರ ಟ್ರೇಡರ್ಸ್, ಗೋಪನಹಳ್ಳಿ

ಕರ್ನಾಟಕ ಕೃಷಿ ಇಲಾಖೆಯು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಗುಣಮಟ್ಟದ ರಸಗೊಬ್ಬರ ಮತ್ತು ಕೀಟನಾಶಕಗಳ ಲಭ್ಯತೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ. ರಾಜ್ಯದಾದ್ಯಂತ ಕಂದಾಯ ಮತ್ತು ಕೃಷಿ ಅಧಿಕಾರಿಗಳು ಇಂತಹ ಉಲ್ಲಂಘನೆಗಳ ವಿರುದ್ಧ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿದ್ದಾರೆ. ರೈತರಿಗೆ ನಿಗದಿತ ಬೆಲೆಯಲ್ಲಿ ಗುಣಮಟ್ಟದ ಉತ್ಪನ್ನಗಳು ದೊರೆಯುವಂತೆ ಮಾಡಲು ಇಲಾಖೆಯು ಕಟಿಬದ್ಧವಾಗಿದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

4 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

4 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

5 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago