ರಾಜ್ಯ

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆ : ಕಠಿಣ ಕ್ರಮ

ಬೆಂಗಳೂರು : ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ.

ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ
ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900 ಮೌಲ್ಯದ ಬಯೋಸ್ಟಿಮುಲೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿಯಾದ ವಸ್ತುಗಳು & ಮೌಲ್ಯ:
GROW-R: ₹58,000
ABDA Gold: ₹1,52,000
Zymegold: ₹30,800
ಸಾಗರಿಕಾ: ₹23,100
ಶಿವರಿಕಾ: ₹2,66,000

ನಂಜನಗೂಡಿನಲ್ಲಿ ಅನಧಿಕೃತ ಕೀಟನಾಶಕ ಜಪ್ತಿ
ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕರಾದ ದೇವರಾಜು ಮಾರ್ಗದರ್ಶನದಲ್ಲಿ, ಶ್ರೀ ಇಂಡಸ್ಟ್ರೀಸ್, ನಂಜನಗೂಡಿನಲ್ಲಿ ಅನಧಿಕೃತವಾಗಿ ತಯಾರಿಸಲಾಗುತ್ತಿದ್ದ 160 ಲೀಟರ್ ಪ್ರೊಫೆನೊಫಾಸ್ ಕೀಟನಾಶಕವನ್ನು ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆಯಲ್ಲಿ ಲೈಸೆನ್ಸ್ ರದ್ದು ಮತ್ತು ಅಮಾನತು
ದಾವಣಗೆರೆಯ ADA (ವಿಜಿಲೆನ್ಸ್ 1 & 2) ಶಿಫಾರಸಿನ ಮೇರೆಗೆ, ದಾವಣಗೆರೆಯ 5 ಚಿಲ್ಲರೆ ಮಾರಾಟಗಾರರು ಮತ್ತು ಜಗಳೂರಿನ 2 ಚಿಲ್ಲರೆ ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿಡಲಾಗಿದೆ. ರಸಗೊಬ್ಬರವನ್ನು ನಿಗದಿತ ಬೆಲೆ (MRP)ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಚಿಲ್ಲರೆ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಹಾಗೆಯೇ, ರಸಗೊಬ್ಬರ ಸಗಟು ಮಾರಾಟಗಾರರು ಜಿಲ್ಲೆಯ ಚಿಲ್ಲರೆ ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಪೂರೈಕೆ ಮಾಡದೆ, ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದರಿಂದ, ಈ ಕೆಳಗಿನ ಸಗಟು ಮಾರಾಟಗಾರರ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ:

ಆಶಾಪೂರಿ ಫರ್ಟಿಲೈಸರ್ಸ್, ದಾವಣಗೆರೆ
ರಾಥೋಡ್ ಫರ್ಟಿಲೈಸರ್ಸ್, ದಾವಣಗೆರೆ
ಶ್ರೀ ಮಲ್ಲಿಕಾರ್ಜುನ ಫರ್ಟಿಲೈಸರ್ಸ್, ದಾವಣಗೆರೆ
ದಿಬ್ಬದಹಳ್ಳಿ ಆಗ್ರೋ ಸರ್ವೀಸ್, ದಾವಣಗೆರೆ
ಶ್ರೀ ಶ್ರೀನಿವಾಸ ಆಗ್ರೋ ಟ್ರೇಡರ್ಸ್, ದಾವಣಗೆರೆ
ಕಿಶೋರ್ ಫರ್ಟಿಲೈಸರ್ಸ್, ದಾವಣಗೆರೆ
ವೀರಭದ್ರೇಶ್ವರ ಫರ್ಟಿಲೈಸರ್ಸ್, ನಲ್ಲೂರು, ಚನ್ನಗಿರಿ ತಾಲೂಕು
ವೀರಭದ್ರೇಶ್ವರ ಟ್ರೇಡರ್ಸ್, ಗೋಪನಹಳ್ಳಿ

ಕರ್ನಾಟಕ ಕೃಷಿ ಇಲಾಖೆಯು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಗುಣಮಟ್ಟದ ರಸಗೊಬ್ಬರ ಮತ್ತು ಕೀಟನಾಶಕಗಳ ಲಭ್ಯತೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ. ರಾಜ್ಯದಾದ್ಯಂತ ಕಂದಾಯ ಮತ್ತು ಕೃಷಿ ಅಧಿಕಾರಿಗಳು ಇಂತಹ ಉಲ್ಲಂಘನೆಗಳ ವಿರುದ್ಧ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿದ್ದಾರೆ. ರೈತರಿಗೆ ನಿಗದಿತ ಬೆಲೆಯಲ್ಲಿ ಗುಣಮಟ್ಟದ ಉತ್ಪನ್ನಗಳು ದೊರೆಯುವಂತೆ ಮಾಡಲು ಇಲಾಖೆಯು ಕಟಿಬದ್ಧವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

4 mins ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

13 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

15 mins ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

17 mins ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

19 mins ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

22 mins ago