ರಾಜ್ಯ

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆ : ಕಠಿಣ ಕ್ರಮ

ಬೆಂಗಳೂರು : ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ.

ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ
ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900 ಮೌಲ್ಯದ ಬಯೋಸ್ಟಿಮುಲೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಜಪ್ತಿಯಾದ ವಸ್ತುಗಳು & ಮೌಲ್ಯ:
GROW-R: ₹58,000
ABDA Gold: ₹1,52,000
Zymegold: ₹30,800
ಸಾಗರಿಕಾ: ₹23,100
ಶಿವರಿಕಾ: ₹2,66,000

ನಂಜನಗೂಡಿನಲ್ಲಿ ಅನಧಿಕೃತ ಕೀಟನಾಶಕ ಜಪ್ತಿ
ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕರಾದ ದೇವರಾಜು ಮಾರ್ಗದರ್ಶನದಲ್ಲಿ, ಶ್ರೀ ಇಂಡಸ್ಟ್ರೀಸ್, ನಂಜನಗೂಡಿನಲ್ಲಿ ಅನಧಿಕೃತವಾಗಿ ತಯಾರಿಸಲಾಗುತ್ತಿದ್ದ 160 ಲೀಟರ್ ಪ್ರೊಫೆನೊಫಾಸ್ ಕೀಟನಾಶಕವನ್ನು ವಶಪಡಿಸಿಕೊಳ್ಳಲಾಗಿದೆ.

ದಾವಣಗೆರೆಯಲ್ಲಿ ಲೈಸೆನ್ಸ್ ರದ್ದು ಮತ್ತು ಅಮಾನತು
ದಾವಣಗೆರೆಯ ADA (ವಿಜಿಲೆನ್ಸ್ 1 & 2) ಶಿಫಾರಸಿನ ಮೇರೆಗೆ, ದಾವಣಗೆರೆಯ 5 ಚಿಲ್ಲರೆ ಮಾರಾಟಗಾರರು ಮತ್ತು ಜಗಳೂರಿನ 2 ಚಿಲ್ಲರೆ ಮಾರಾಟಗಾರರ ಲೈಸೆನ್ಸ್‌ಗಳನ್ನು ಅಮಾನತಿನಲ್ಲಿಡಲಾಗಿದೆ. ರಸಗೊಬ್ಬರವನ್ನು ನಿಗದಿತ ಬೆಲೆ (MRP)ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಚಿಲ್ಲರೆ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಹಾಗೆಯೇ, ರಸಗೊಬ್ಬರ ಸಗಟು ಮಾರಾಟಗಾರರು ಜಿಲ್ಲೆಯ ಚಿಲ್ಲರೆ ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು ಪೂರೈಕೆ ಮಾಡದೆ, ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ್ದರಿಂದ, ಈ ಕೆಳಗಿನ ಸಗಟು ಮಾರಾಟಗಾರರ ಲೈಸೆನ್ಸ್‌ಗಳನ್ನು ರದ್ದುಗೊಳಿಸಲಾಗಿದೆ:

ಆಶಾಪೂರಿ ಫರ್ಟಿಲೈಸರ್ಸ್, ದಾವಣಗೆರೆ
ರಾಥೋಡ್ ಫರ್ಟಿಲೈಸರ್ಸ್, ದಾವಣಗೆರೆ
ಶ್ರೀ ಮಲ್ಲಿಕಾರ್ಜುನ ಫರ್ಟಿಲೈಸರ್ಸ್, ದಾವಣಗೆರೆ
ದಿಬ್ಬದಹಳ್ಳಿ ಆಗ್ರೋ ಸರ್ವೀಸ್, ದಾವಣಗೆರೆ
ಶ್ರೀ ಶ್ರೀನಿವಾಸ ಆಗ್ರೋ ಟ್ರೇಡರ್ಸ್, ದಾವಣಗೆರೆ
ಕಿಶೋರ್ ಫರ್ಟಿಲೈಸರ್ಸ್, ದಾವಣಗೆರೆ
ವೀರಭದ್ರೇಶ್ವರ ಫರ್ಟಿಲೈಸರ್ಸ್, ನಲ್ಲೂರು, ಚನ್ನಗಿರಿ ತಾಲೂಕು
ವೀರಭದ್ರೇಶ್ವರ ಟ್ರೇಡರ್ಸ್, ಗೋಪನಹಳ್ಳಿ

ಕರ್ನಾಟಕ ಕೃಷಿ ಇಲಾಖೆಯು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಗುಣಮಟ್ಟದ ರಸಗೊಬ್ಬರ ಮತ್ತು ಕೀಟನಾಶಕಗಳ ಲಭ್ಯತೆಯನ್ನು ಖಾತ್ರಿಪಡಿಸಲು ಬದ್ಧವಾಗಿದೆ. ರಾಜ್ಯದಾದ್ಯಂತ ಕಂದಾಯ ಮತ್ತು ಕೃಷಿ ಅಧಿಕಾರಿಗಳು ಇಂತಹ ಉಲ್ಲಂಘನೆಗಳ ವಿರುದ್ಧ ನಿರಂತರವಾಗಿ ದಾಳಿಗಳನ್ನು ನಡೆಸುತ್ತಿದ್ದಾರೆ. ರೈತರಿಗೆ ನಿಗದಿತ ಬೆಲೆಯಲ್ಲಿ ಗುಣಮಟ್ಟದ ಉತ್ಪನ್ನಗಳು ದೊರೆಯುವಂತೆ ಮಾಡಲು ಇಲಾಖೆಯು ಕಟಿಬದ್ಧವಾಗಿದೆ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago