ರಾಜ್ಯ

ಸಿಎಂ ಬೆಂಗಾವಲು ವಾಹನ ಎದುರು ಚಾಲನೆ: ಶಾಸಕ ಜನಾರ್ಧನ ರೆಡ್ಡಿಯ 3 ಕಾರು ಪೊಲೀಸ್‌ ವಶಕ್ಕೆ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಗೆ ಎದುರು ಹೋಗಿ ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ  ಪೊಲೀಸರು ಶಾಸಕ ಜನಾರ್ಧನ ರೆಡ್ಡಿಯ ಕಾರನ್ನ ವಶಕ್ಕೆ ಪಡೆದಿದ್ದಾರೆ.

ಸಿಎಂ ಕಾನ್‌ ವೇ ನಿಯಮ ಉಲ್ಲಂಘಿಸಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಕೇಸ್‌ ಅನ್ವಯ ಗಂಗಾವತಿ ಪೊಲೀಸರು ಜನಾರ್ಧನ ರೆಡ್ಡಿಯ ಮೂರು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಅ.5 ರಂದು ಸಿಎಂ ಸಿದ್ದರಾಮಯ್ಯ  ಗಂಗಾವತಿ ಮಾರ್ಗವಾಗಿ ಪ್ರಯಾಣಿಸುವ ಸಂದರ್ಭದಲ್ಲಿ ಕಾನ್‌ ವೇ ಎದುರು  ಶಾಸಕ ಜನಾರ್ಧನ ರೆಡ್ಡಿ ಕಾರು ಚಾಲಾಯಿಸಿತ್ತು. ಈ  ಹಿನ್ನೆಲೆಯಲ್ಲಿ ಭದ್ರತಾ ಲೋಪಕ್ಕೆ ಅಡ್ಡಿಯಾಗಿರುವ ಕಾರಣ ಪೊಲೀಸರು ಚಾಲಕನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

 

ಬಳಿಕ ಶಾಸಕ ಜನಾರ್ಧನ ರೆಡ್ಡಿಗೆ ಸೇರಿರುವ ರೇಂಜ್‌ ರೋವರ್‌, ಸ್ಕಾರ್ಪಿಯೋ ಮತ್ತು ಫಾರ್ಚುನರ್‌ ಕಾರನ್ನು ಗಂಗಾವತಿ ಸಂಚಾರಿ ಪೊಲೀಸರು ಸೀಜ್‌ ಮಾಡಿದ್ದು, ಮಂಗಳವಾರ ಬೆಂಗಳೂರಿನಲ್ಲಿ ಜಪ್ತಿ ಮಾಡಿದ್ದ ಕಾರನ್ನು ಗಂಗಾವತಿಗೆ ಸ್ಥಳಾಂತರ ಮಾಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಅಕ್ಟೋಬರ್‌.8) ಶಾಸಕ ಜನಾರ್ಧನ ರೆಡ್ಡಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ನನಗೆ ಏನೇ ತೊಂದರೆ ಕೊಟ್ಟರೂ, ಏನೇ ಇದ್ದರೂ, ಸಿದ್ದರಾಮಯ್ಯ ಅಲ್ಲ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಗೌರವ ಕೊಟ್ಟು ಸುಮ್ಮನಿದ್ದೇನೆ ಎಂದಿದ್ದಾರೆ.

ಅಸಲಿಗೆ ಆಗಿದ್ದು ಇದೆ..
ಸಿಎಂ ಸಂಚಾರ ಹಿನ್ನೆಲೆಯಲ್ಲಿ ಗಂಗಾವತಿಯಲ್ಲಿ 30ಕ್ಕೂ ಅಧಿಕ ನಿಮಿಷಗಳ ಕಾಲ ಸಂಚಾರ ಸ್ಥಗಿತಗೊಳಿಸಿದ್ದರು. ಅಂದಿನ ದಿನ ನಾನು ಗಂಗಾವತಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಹೋಗಿದ್ದೆ. ಆದರೆ, ಅಂದೇ ನಮ್ಮ ಮನೆಯಲ್ಲಿ ಹೋಮವನ್ನು ಆಯೋಜಿಸಲಾಗಿತ್ತು. ನಮ್ಮ ಮನೆಯವರು ಪೂರ್ಣಾಹುತಿಗೆ ಬರಬೇಕು ಎಂದಿದ್ದರು. ಹೀಗಾಗಿ ಗಂಗಾವತಿಯಿಂದ ಮನೆಗೆ ಹೊರಟಿದ್ದೆ. ಆ ವೇಳೆ ಅರ್ಧ ಗಂಟೆ ಕಾಲ ಕಾದರೂ ಕಾನ್‌ ವೇ ಬರಲಿಲ್ಲ. ಆ ಕಾರಣಕ್ಕಾಗಿ ನಾನು ಪೊಲೀಸರಿಗೆ ಹೇಳಿ ಹೋಗಬಹುದಿತ್ತು. ಆದರೆ, ನನ್ನ ಮುಂದೆ ಇರುವ ವಾಹನವನ್ನು ಬಿಟ್ಟರೆ ಪೊಲೀಸರ ಕರ್ತವ್ಯಕ್ಕೆ ಲೋಪಕ್ಕೆ ಸಮಸ್ಯೆಯಾಗುತ್ತದೆ ಎಂದು ಭಾವಿಸಿ, ಡಿವೈಡರ್‌ ಮೇಲೆ ಕಾರು ಚಲಾಯಿಸಲು ಚಾಲಕನಿಗೆ ತಿಳಿಸಿದೆ ಅಷ್ಟೇ. ಬೇಕಿದ್ದರೆ ನನ್ನ ಕಾರಿನಲ್ಲಿ ಸಿಸಿ ಕ್ಯಾಮೆರಾ ದೃಶ್ಯ ಇದೆ ನೋಡಬಹುದು. ನಾನು ನಿಯಮ ಉಲ್ಲಂಘನೆ ಮಾಡುವಷ್ಟು ಮೂರ್ಖನಲ್ಲ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ನಾನು ಡಿವೈಡರ್‌ ಮೇಲೆ ಚಾಲಕನಿಗೆ ತೆರಳಲು ತಿಳಿಸಿದ್ದೆ. ಹೀಗಾಗಿ ಆತನ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಅದಕ್ಕೆ ನಾನು ಕಾನೂನಿನ ಮುಖಾಂತರವೇ ಎದುರಿಸುತ್ತೇನೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

4 mins ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

21 mins ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

53 mins ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

1 hour ago

ಸೈಬರ್‌ ವಂಚನೆ ಕೇವಲ ಆರ್ಥಿಕ ಅಪರಾಧವಲ್ಲ. ರಾಷ್ಟ್ರೀಯ ಭದ್ರತೆಗೆ ಸವಾಲು: ಅಮಿತ್‌ ಶಾ

ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್‌ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್‌ ಭದ್ರತೆಯು ಈಗ ಕೇವಲ…

2 hours ago

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…

2 hours ago