ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರೈಲ್ವೇ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸಿತ್ತು. ಅದರ ಫಲವಾಗಿ ಕನ್ನಡ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಮತ್ತೆ ಮತ್ತೆ ಕನ್ನಡವನ್ನು ಪರೀಕ್ಷೆಗಳಿಂದ ಕೈಬಿಡುವ ಪ್ರಯತ್ನಗಳನ್ನು ಕರವೇ ಗಮನಿಸುತ್ತಿದೆ. ಕೇವಲ ಕೆಲವು ದಿನಗಳ ಹಿಂದೆಯಷ್ಟೇ ರೈಲ್ವೇ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ, ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಬೇಕೆಂದು ನಾವು ಗಟ್ಟಿಯಾಗಿ ಒತ್ತಾಯಿಸಿದ್ದೆವು. ರೈಲ್ವೇ ಸಚಿವರಾದ ಸೋಮಣ್ಣನವರೂ ಸಹ ಕನ್ನಡದಲ್ಲಿ ಪರೀಕ್ಷೆಗಳನ್ನು ನಡೆಸಬೇಕೆಂದು ಸೂಚಿಸಿದ್ದರು.
ಆದರೆ ಇದು ನಡೆದು ಕೇವಲ ಕೆಲವು ದಿನಗಳಲ್ಲೇ ಮತ್ತೆ ಕನ್ನಡವನ್ನು ಕೈಬಿಟ್ಟು ಪರೀಕ್ಷೆಗಳನ್ನು ನಡೆಸಲು ರೈಲ್ವೇ ಇಲಾಖೆ ಮುಂದಾಗಿದೆ. ಇದು ಕನ್ನಡಿಗರ ಸ್ವಾಭಿಮಾನವನ್ನು ಮತ್ತೆ ಮತ್ತೆ ಕೆಣಕುವಂತಹ ಅಪಮಾನಕಾರಿ ಕ್ರಮವಾಗಿದೆ. ಇದು ಕೇವಲ ಭಾಷಾ ಅನ್ಯಾಯವಲ್ಲ, ಕನ್ನಡಿಗರ ಹಕ್ಕುಗಳ ಮೇಲಿನ ನೇರ ಆಕ್ರಮಣವಾಗಿದೆ.
ರೈಲ್ವೇಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೂ ಕಡ್ಡಾಯವಾಗಿ ನಡೆಸಬೇಕು. ಕನ್ನಡಿಗರು ಇನ್ನೊಂದು ಭಾಷೆಯನ್ನು ಕಲಿತು ಪರೀಕ್ಷೆ ಬರೆಯಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಕರವೇ ಎಂದಿಗೂ ಒಪ್ಪುವುದಿಲ್ಲ. ಈ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ, ಕರವೇ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳನ್ನು ಆಯೋಜಿಸಲಿದೆ. ರೈಲ್ವೇ ಕಚೇರಿಗಳ ಮುಂದೆ ಧರಣಿ, ಬಂದ್, ರಸ್ತೆ ತಡೆ, ಹಾಗೂ ಅಗತ್ಯವಿದ್ದರೆ ಹೋರಾಟದ ತೀವ್ರ ಸ್ವರೂಪಗಳನ್ನು ತೆಗೆದುಕೊಳ್ಳಲು ಸಿದ್ಧವಿದೆ. ಕನ್ನಡಿಗರ ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಕರವೇ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…