ರಾಜ್ಯ

ವೀರೇಂದ್ರ ಪಪ್ಪಿ ಆಸ್ತಿ ಕಂಡು ಬೆಚ್ಚಿದ ಇಡಿ ; 40ಕೆಜಿ ಚಿನ್ನ ಸೀಜ್…!

ಬೆಂಗಳೂರು : ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಮತ್ತೆ ಜಾರಿ ನಿದೇರ್ಶನಾಲಯ (ಇ.ಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸಲಾಗಿದ್ದು 51 ಕೋಟಿ ಮೌಲ್ಯದ 40 ಕೆಜಿ ಚಿನ್ನದ ಗಟ್ಟಿಯನ್ನು ಪತ್ತೆಹಚ್ಚಿದೆ.

ಗುರುವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಿಕೆರೆಯ ಫೆಡರಲ್ ಬ್ಯಾಂಕ್ ಸೇರಿದಂತೆ ದಾಳಿ ನಡೆಸಿರುವ ಅಧಿಕಾರಿಗಳು ವೀರೇಂದ್ರ ಪಪ್ಪಿಗೆ ಸೇರಿದ 51 ಕೋಟಿ ಮೌಲ್ಯದ ಚಿನ್ನದ ಗಡಿಯನ್ನು ಪತ್ತೆಹಚ್ಚಿದೆ. ಈವರೆಗೂ ಈಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಗೆ ಸೇರಿದ 200 ಕೋಟಿ ಹೆಚ್ಚು ಮೌಲ್ಯದ ನಗದು ಚಿನ್ನಾಭರಣ ಬೆಲೆ ಬಾಳುವ ವಾಹನಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಿದೆ.

ಗೋವಾ ರಾಜಧಾನಿ ಪಣಜಿಯಲ್ಲಿ ಕ್ಯಾಸಿನೋ ನಡೆಸುತ್ತಿರುವ ನಡೆಸುತ್ತಿರುವ ವೀರೇಂದ್ರ ಪಪ್ಪಿ, ಅಕ್ರಮ ಬೆಟ್ಟಿಂಗ್ ನಲ್ಲಿ ಸುಮಾರು 2000 ಕೋಟಿಗೂ ಅಧಿಕ ಲಾಭಗಳಿಸಿದ್ದಾರೆಂಬಯದನ್ನು ಇಡಿ ಅಧಿಕಾರಿಗಳು ಪತ್ತೆ ಹಚ್ಚಿದರು . ಈ ಹಿಂದೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು 103 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದರು.

ಇದನ್ನು ಓದಿ : ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.

ದಾಳಿ ವೇಳೆ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿತ್ತು. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಸದ್ಯ ವಿರೇಂದ್ರ ಪಪ್ಪಿಯವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

9 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

9 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

9 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago