ರಾಜ್ಯ

ವೀರೇಂದ್ರ ಪಪ್ಪಿ ಆಸ್ತಿ ಕಂಡು ಬೆಚ್ಚಿದ ಇಡಿ ; 40ಕೆಜಿ ಚಿನ್ನ ಸೀಜ್…!

ಬೆಂಗಳೂರು : ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಮತ್ತೆ ಜಾರಿ ನಿದೇರ್ಶನಾಲಯ (ಇ.ಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸಲಾಗಿದ್ದು 51 ಕೋಟಿ ಮೌಲ್ಯದ 40 ಕೆಜಿ ಚಿನ್ನದ ಗಟ್ಟಿಯನ್ನು ಪತ್ತೆಹಚ್ಚಿದೆ.

ಗುರುವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಿಕೆರೆಯ ಫೆಡರಲ್ ಬ್ಯಾಂಕ್ ಸೇರಿದಂತೆ ದಾಳಿ ನಡೆಸಿರುವ ಅಧಿಕಾರಿಗಳು ವೀರೇಂದ್ರ ಪಪ್ಪಿಗೆ ಸೇರಿದ 51 ಕೋಟಿ ಮೌಲ್ಯದ ಚಿನ್ನದ ಗಡಿಯನ್ನು ಪತ್ತೆಹಚ್ಚಿದೆ. ಈವರೆಗೂ ಈಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಗೆ ಸೇರಿದ 200 ಕೋಟಿ ಹೆಚ್ಚು ಮೌಲ್ಯದ ನಗದು ಚಿನ್ನಾಭರಣ ಬೆಲೆ ಬಾಳುವ ವಾಹನಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಿದೆ.

ಗೋವಾ ರಾಜಧಾನಿ ಪಣಜಿಯಲ್ಲಿ ಕ್ಯಾಸಿನೋ ನಡೆಸುತ್ತಿರುವ ನಡೆಸುತ್ತಿರುವ ವೀರೇಂದ್ರ ಪಪ್ಪಿ, ಅಕ್ರಮ ಬೆಟ್ಟಿಂಗ್ ನಲ್ಲಿ ಸುಮಾರು 2000 ಕೋಟಿಗೂ ಅಧಿಕ ಲಾಭಗಳಿಸಿದ್ದಾರೆಂಬಯದನ್ನು ಇಡಿ ಅಧಿಕಾರಿಗಳು ಪತ್ತೆ ಹಚ್ಚಿದರು . ಈ ಹಿಂದೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು 103 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದರು.

ಇದನ್ನು ಓದಿ : ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.

ದಾಳಿ ವೇಳೆ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿತ್ತು. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಸದ್ಯ ವಿರೇಂದ್ರ ಪಪ್ಪಿಯವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

8 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

9 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago