rahul gandi hd kumar swami
ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…