ರಾಜ್ಯ

ಮತಗಳ್ಳತನ ಆರೋಪ : ರಾಹುಲ್‌ ಪ್ರತಿಭಟನೆಗೆ ಎಚ್‌ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಸಚಿವರು, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

1 hour ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

1 hour ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

1 hour ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

1 hour ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

1 hour ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

1 hour ago