ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್ ಅವರು, ರಾಹುಲ್ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ ಮತಗಳ್ಳತನ ಆಗಿರುವ ಬಗ್ಗೆ ಪ್ರಸ್ತಾಪಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಬರುವ ಮತಗಳು ಬಹುತೇಕ ಕಳುವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಿದ್ದೇನೆಂದು ತಿಳಿಸಿದ್ದೇನೆ ಎಂದು ಹೇಳಿದರು.
ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಲಕ್ಷ್ಮಣ್ ಅವರು, ತನಿಖೆ ಬಳಿಕ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ. ಇಲ್ಲಿ ಧರ್ಮಸ್ಥಳ ದೇವಸ್ಥಾನದ ಬಗ್ಗೆಯಾಗಲಿ, ವೀರೇಂದ್ರ ಹೆಗ್ಗಡೆಯವರ ಬಗ್ಗೆಯಾಗಲಿ ತನಿಖೆ ಮಾಡುತ್ತಿಲ್ಲ. ದೂರುದಾರು 164 ಅಡಿಯಲ್ಲಿ ಹೇಳಿಕೆ ನೀಡಿದ್ದರಿಂದ ಎಸ್ಐಟಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…