rahul gandhi (1)
ಬೆಂಗಳೂರು : ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಶುಕ್ರವಾರ ಚುನಾವಣಾ ಆಯೋಗದ ಮುಖ್ಯಾಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಭೇಟಿ ಮಾಡಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನದ ಬಗ್ಗೆ ದೂರು ನೀಡಿದ್ದಾರೆ.
ಫ್ರೀಡಂಪಾರ್ಕ್ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ 5 ಪ್ರಶ್ನೆಗಳನ್ನು ಕೇಳಿದರು. ಮತದಾನ ಮಾಡಿರುವವರ ಡಿಜಿಟಲ್ ಪ್ರತಿಯನ್ನು ನೀಡದಿರುವುದೇಕೆ? ವಿಡಿಯೋ ಸಾಕ್ಷ್ಯಗಳನ್ನು ನಾಶ ಪಡಿಸಿರುವುದೇಕೆ? ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿಯ ಸಾಮೂಹಿಕ ವಂಚನೆಯಲ್ಲಿ ಭಾಗಿಯಾಗಿರುವುದೇಕೆ? ಕೇಂದ್ರ ಚುನಾವಣಾ ಆಯೋಗ ವಿರೋಧ ಪಕ್ಷದ ನಾಯಕರನ್ನು ಬೆದರಿಸುತ್ತಿರುವುದೇಕೆ? ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಏಜೆಂಟ್ನಂತೆ ವರ್ತಿಸುತ್ತಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಚುನಾವಣಾ ಆಯೋಗ ತಮನ್ನು ಬೆದರಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. ರಾಹುಲ್ಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದರು.
ಚುನಾವಣಾ ಆಯೋಗಕ್ಕೆ ಭೇಟಿ ನೀಡಿದ ರಾಹುಲ್ಗಾಂಧಿ ತಮ್ಮ ಆರೋಪಕ್ಕೆ ಪೂರ್ವಕವಾಗಿ ದಾಖಲಾತಿಗಳನ್ನು ನೀಡಿದ್ದಲ್ಲದೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದೇ ವೇಳೆ ಆಯೋಗದ ಅಧಿಕಾರಿಗಳು ರಾಹುಲ್ಗಾಂಧಿ ಅವರಿಗೆ ತಮ್ಮ ಆರೋಪಗಳನ್ನು ಪ್ರಮಾಣ ಪತ್ರದ ಮಾದರಿಯಲ್ಲಿ ನೀಡುವಂತೆ ಕೇಳಿದ್ದಾರೆ. ಆದರೆ ಅದಕ್ಕೆ ರಾಹುಲ್ಗಾಂಧಿ ನಿರಾಕರಿಸಿದ್ದಾರೆ.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…