priyanka kharge
ಬೆಂಗಳೂರು: ಕಾಂಗ್ರೆಸ್ ಯಾವತ್ತೂ ಹಿಟ್ ಅಂಡ್ ರನ್ ಮಾಡೋದಿಲ್ಲ. ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ದಾಖಲಾತಿ ಇದೆ. ಅದನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡುತ್ತಾರೆ. ದೆಹಲಿಯಲ್ಲಿ ಮತಗಳ್ಳತನ ದಾಖಲೆ ಬಿಡುಗಡೆ ಮಾಡಲಾಗುತ್ತದೆ. ಅದಾದ ಮೇಲೆ ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿದೆ ಎಂದು ನೀವೇ ತೀರ್ಮಾನ ತೆಗೆದುಕೊಳ್ಳಿ. ಇವತ್ತು ದಾಖಲೆ ಬಿಡುಗಡೆ ಮಾಡುತ್ತಾರೆ. ಆಗಸ್ಟ್.8ರಂದು ಕರ್ನಾಟಕದಲ್ಲಿ ದಾಖಲಾತಿ ಬಿಡುಗಡೆ ಮಾಡುತ್ಥಾರೆ ಎಂದು ತಿಳಿಸಿದರು.
ಇನ್ನು ಪ್ರತಿಭಟನೆಗೆ ಬಿಜೆಪಿ ವಿರೋಧ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಆರೋಪನೇ ಮಾಡಿಲ್ಲ. ಮತಗಳ್ಳತನ ಆಗಿದೆ ಸಾಕ್ಷಿ ಕೊಡುತ್ತೇವೆ ಎಂದು ಹೇಳುತ್ತಾ ಇದ್ದೇವೆ. ಬಿಜೆಪಿಯವರು ಯಾಕೆ ಚುನಾವಣೆ ಆಯೋಗದ ವಕ್ತಾರರ ರೀತಿ ಮಾತನಾಡುತ್ತಾರೆ. ಇಡಿ, ಐಟಿ, ಎಲ್ಲಾ ಸಂಸ್ಥೆಗಳಿಗೂ ಬಿಜೆಪಿ ಅವರು ವಕ್ತಾರರಂತೆ ಆಗಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…