ರಾಜ್ಯ

ಹೆಬ್ಬಾಳದಲ್ಲೂ ನಡೆದಿತ್ತು ಮತ ಕಳವು : ಕ್ಷೇತ್ರದ ಶಾಸಕ, ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು : 2023 ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರದ ಹೆಬ್ಬಾಳ ಕ್ಷೇತ್ರದಲ್ಲಿಯೂ ವೋಟ್ ಚೋರಿ ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಕ್ಷೇತ್ರದ ಶಾಸಕರೂ ಆಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಬಹಿರಂಗಪಡಿಸಿದ್ದಾರೆ.

ಹೆಬ್ಬಾಳ ಕ್ಷೇತ್ರದ ಆರ್.ಟಿ.ನಗರದಲ್ಲಿ ಗುರುವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವೋಟ್ ಚೋರಿ ವಿರುದ್ಧ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಸಚಿವರು ಈ ಗಂಭೀರ ಆರೋಪ ಮಾಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಬಾಳದಲ್ಲಿ 20 ಸಾವಿರಕ್ಕೂ ಅಧಿಕ ಮತಗಳ ಕಳವು ನಡೆದಿದೆ. ಆದಾಗ್ಯೂ ನಮ್ಮ ಮತ ಕ್ಷೇತ್ರದ ಜನತೆ ಮತ್ತು ಮತದಾರರು ನನ್ನನ್ನು ಕೈಬಿಡಲಿಲ್ಲ. 32 ಸಾವಿರಕ್ಕೂ ಹೆಚ್ಚ ಮತಗಳ ಅಂತರದಿಂದ ಗೆಲುವು ತಂದುಕೊಟ್ಟರು. ಅವರಿಗೆ ಆಭಾರಿಯಾಗಿರುವುದಾಗಿ ತಿಳಿಸಿದರು.

ಪ್ರಜಾಪ್ರಭುತ್ವದ ಹತ್ಯೆ
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಒಂದೇ ಮತ ಚಲಾಯಿಸುವ ಹಕ್ಕನ್ನು ನೀಡಲಾಗಿದೆ. ಆ ಒಂದು ಮತವನ್ನೇ ಕಸಿದುಕೊಳ್ಳುವಂತಹ ಪ್ರಯತ್ನವನ್ನು ಬಿಜೆಪಿ ಮಾಡುತ್ತಾ ಬಂದಿದೆ. ಈ ಮೂಲಕ ಪ್ರಜಾಪ್ರಭುತ್ವದ ಹತ್ಯೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಕ್ಷೇತ್ರದಲ್ಲಿ ವಾಸವಿಲ್ಲದಿದ್ದರೂ ಚುನಾವಣೆ ಸಂದರ್ಭದಲ್ಲಿ ಸಾವಿರಾರು ಜನ ಪ್ರತ್ಯಕ್ಷರಾಗುತ್ತಾರೆ. ಬೆಂಗಳೂರು ಹೊರವಲಯದ ಪಟ್ಟಣಗಳಿಂದ ಇಲ್ಲಿಗೆ ಬಂದು ವೋಟ್ ಹಾಕಿ ಹೋಗುತ್ತಾರೆ. ಮತ್ತೆ ಅವರು ಬರುವುದು ಮುಂದಿನ ಚುನಾವಣೆ ವೇಳೆಗೆ ಎಂದು ಹೇಳಿದ ಅವರು, ಗಂಗೇನಹಳ್ಳಿ ವಾರ್ಡ್ ನ ವಿಳಾಸ ಹೊಂದಿದ ಸಾವಿರಕ್ಕೂ ಅಧಿಕ ಜನರು ಬಂದು ಮತ ಹಾಕುತ್ತಾರೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:-ಮೈಸೂರು | ರೈತನ ಮೇಲೆ ಹುಲಿ ದಾಳಿ, ಸ್ಥಿತಿ ಗಂಭೀರ

ಜಾತಿ, ಧರ್ಮಗಳ ಮಧ್ಯೆ ವಿಷಬೀಜ ಬಿತ್ತುತ್ತಾ ದೇಶ ಮತ್ತು ರಾಜ್ಯಗಳನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಾ ಬಂದಿದೆ. ಈ ಪಕ್ಷಕ್ಕೆ ದೇವಸ್ಥಾನ, ಮಸೀದಿ ವಿಚಾರಗಳನ್ನು ಬಿಟ್ಟರೆ ಯಾವುದೇ ವಿಷಯ ಸಿಗುತ್ತಿಲ್ಲ. ಆ ಪಕ್ಷದ ಯಾವೊಬ್ಬ ನಾಯಕನೂ ದೇಶ ಮತ್ತು ರಾಜ್ಯದ ಅಭಿವೃದ್ಧಿ ಬಗ್ಗೆ ಮಾತನಾಡುವುದೇ ಇಲ್ಲ. ಅದರ ಬದಲಿಗೆ ದ್ವೇಷವನ್ನು ಹುಟ್ಟುಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಬೈರತಿ ಸುರೇಶ್, ಬಡವರು, ದೀನದಲಿತರು, ದುರ್ಬಲ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಕಾರ್ಯಕ್ರಮ ರೂಪಿಸುವ ಪಕ್ಷವೆಂದರೆ ಕಾಂಗ್ರೆಸ್. ದೇಶ ಮತ್ತು ರಾಜ್ಯದ ನಿರ್ಮಾಣ ನಮ್ಮ ಪಕ್ಷದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಪಾಲಿಕೆ ಚುನಾವಣೆಯಲ್ಲಿ ಎಚ್ಚರ ವಹಿಸಿ
ಎಲ್ಲಾ ಕಡೆ ಮತಗಳವು ಆಗುತ್ತಿರುವ ಹಿನ್ನೆಲೆಯಲ್ಲಿ ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನರು ಎಚ್ಚರಿಕೆ ವಹಿಸಬೇಕು. ಮತಗಳವು ಪ್ರಕರಣಗಳನ್ನು ಪತ್ತೆ ಮಾಡಿ ಪ್ರಜಾಪ್ರಭುತ್ವವನ್ನು ಉಳಿಸುವ ಕೆಲಸ ಮಾಡಬೇಕು. ಮುಂಬರುವ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ನಗರಪಾಲಿಕೆಗಳಿಗೆ ಚುನಾವಣೆ ನಡೆಯಲಿದ್ದು, ಅತ್ಯಂತ ಎಚ್ಚರದಿಂದ ಮತದಾರರ ಪಟ್ಟಿಗಳನ್ನು ಪರಿಶೀಲಿಸಿ, ಮತಗಳವನ್ನು ತಡೆಗಟ್ಟಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಸಾವಿರಾರು ಕಾರ್ಯಕರ್ತರು ಪಾಳ್ಗೊಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

2 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

2 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

2 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

2 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

2 hours ago