ರಾಜ್ಯ

ವೃಕ್ಷಮಾತೆ ನಿಧನ | ಸಿಎಂ ಸೇರಿ ಗಣ್ಯರ ಸಂತಾಪ ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು(ನ.14)ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್‌, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇನ್ನೂ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ತಿಳಿಸಿದರು.

ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಇನ್ನಿಲ್ಲ

114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು.

ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ
ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು.

ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

36 mins ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

57 mins ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

3 hours ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

4 hours ago