ರಾಜ್ಯ

ವೃಕ್ಷಮಾತೆ ನಿಧನ | ಸಿಎಂ ಸೇರಿ ಗಣ್ಯರ ಸಂತಾಪ ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಇಂದು(ನ.14)ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್‌, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇನ್ನೂ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ತಿಳಿಸಿದರು.

ಇದನ್ನು ಓದಿ: ಸಾಲುಮರದ ತಿಮ್ಮಕ್ಕ ಇನ್ನಿಲ್ಲ

114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು.

ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ
ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು.

ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago