ರಾಜ್ಯ

ನಟ ದರ್ಶನ್‌ಗೆ ವಿವಿಐಪಿ ಭದ್ರತೆ : ವಿಡಿಯೋ ವೈರಲ್‌

ಬೆಂಗಳೂರು : ನಟ ದರ್ಶನ್‍ಗೆ ವಿಮಾನ ನಿಲ್ದಾಣದಲ್ಲಿ ವಿವಿಐಪಿ ಭದ್ರತೆ ಒದಗಿಸಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ಹತ್ತು ದಿನಗಳ ಕಾಲ ವಿದೇಶ ಪ್ರವಾಸದಲ್ಲಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಕುಟುಂಬ ಸಮೇತ ಭಾರತಕ್ಕೆ ಮರಳಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಟರ್ಮಿನಲ್ ನಲ್ಲಿ ಮುಖ್ಯದ್ವಾರದಿಂದ ಕಾರಿನವರೆಗು ಕೇಂದ್ರ ಅರೆಸೇನಾ ಪಡೆ ಸಿಐಎಸ್‍ಎಫ್ ಸಿಬ್ಬಂದಿಗಳು ಎಸ್ಕಾರ್ಟ್ ಮಾಡಿದ್ದಾರೆ.

ಸಬ್ ಇನ್‍ಸ್ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರನ್ನು ಒಳಗೊಂಡಂತೆ ನಾಲ್ವರು ಸಿಐಎಸ್‍ಎಫ್‍ನ ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿಗಳು ದರ್ಶನ್ ಅವರ ಸುತ್ತ ಹೆಜ್ಜೆ ಹಾಕಿ ಎಸ್ಕಾರ್ಟ್ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ.ತಡರಾತ್ರಿ ಆಗಿದ್ದರಿಂದ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಜನ ಕೂಡ ಇರಲಿಲ್ಲ. ದರ್ಶನ್ ಅವರಿಗೆ ಅಭಿಮಾನಿಗಳ ಕಾಟವೂ ಇರಲಿಲ್ಲ. ಆದರೂ ವಿವಿಐಪಿ ಭದ್ರತೆಯೊಂದಿಗೆ ಕಾರಿನವರೆಗೂ ಕರೆತಂದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ದರ್ಶನ್ ಅವರಿಗೆ ತಮದೇ ಆದ ಖಾಸಗಿ ಅಂಗರಕ್ಷಕರು ಹಾಗೂ ಸಿಬ್ಬಂದಿಗಳು ಇದ್ದಾರೆ. ವೆಲ್‍ಫೈಯರ್, ರೇಂಜ್‍ರೋವರ್, ಫಾರ್ಚೂನರ್‍ನಂತಹ ಐಷಾರಾಮಿ ಕಾರುಗಳಲ್ಲಿ ದರ್ಶನ್ ಅವರ ಸಿಬ್ಬಂದಿ ಮತ್ತು ಅಂಗರಕ್ಷಕರು ವಿಮಾನನಿಲ್ದಾಣಕ್ಕೆ ಆಗಮಿಸಿದ್ದರು. ಅವರನ್ನೆಲ್ಲಾ ಬದಿಗಿರಿಸಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಗಳು ಎಸ್ಕಾರ್ಟ್ ಮಾಡಿರುವುದೇಕೆ ಎಂಬ ಚರ್ಚೆಗಳು ನಡೆಯುತ್ತಿವೆ.

ವಿಮಾನನಿಲ್ದಾಣದಿಂದ ಹೊರಬರುತ್ತಿದ್ದಂತೆ ದರ್ಶನ್ ಅವರ ಬಳಿಯಿದ್ದ ಬ್ಯಾಗ್ ಅನ್ನು ಗನ್‍ಮ್ಯಾನ್ ಒಬ್ಬರು ಪಡೆದುಕೊಂಡಿದ್ದಾರೆ. ಬೆನ್ನನ್ನು ಹಿಡಿದುಕೊಂಡು ದರ್ಶನ್ ನಡೆದು ಬರುತ್ತಿರುವುದು ತಾವಿನ್ನೂ ಸಂಪೂರ್ಣ ಗುಣಮುಖರಾಗಿಲ್ಲ ಎಂಬುದನ್ನು ತೋರಿಸುವ ಪ್ರಯತ್ನವಾಗಿದೆ.

ಎಸ್ಕಾರ್ಟ್‍ನಲ್ಲಿ ದರ್ಶನ್ ಮುಂದೆ ಬಂದರೆ ಅವರ ಹಿಂದೆ ಪತ್ನಿ ವಿಜಯಲಕ್ಷ್ಮಿ ಕೂಡ ಸಿಐಎಸ್‍ಎಫ್ ಸಿಬ್ಬಂದಿಗಳ ಭದ್ರತೆಯೊಂದಿಗೆ ಆಗಮಿಸಿದ್ದಾರೆ. ಕಾರಿನ ಬಳಿ ಬಂದಾಗ ದರ್ಶನ್ ಸಿಐಎಸ್‍ಎಫ್ ಅಧಿಕಾರಿಗೆ ಧನ್ಯವಾದ ಹೇಳಿದ್ದಾರೆ. ಅವರು ವೆಲ್‍ಕಮ್ ಎಂದು ಪ್ರತಿಕ್ರಿಯಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರ ಜಾಮೀನು ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೊಳಗಾಗಿದೆ. ಹೈಕೋರ್ಟ್ ನಲ್ಲಿರುವ ಜಾಮೀನನ್ನು ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಿದ್ದಾರೆ.

ವಿಚಾರಣಾ ಹಂತದಲ್ಲೇ ಸುಪ್ರೀಂಕೋರ್ಟ್ ಕೊಲೆ ಆರೋಪಿಗೆ ಜಾಮೀನು ನೀಡಿರುವ ಹೈಕೋರ್ಟ್‍ನ ಕ್ರಮಗಳ ಬಗ್ಗೆ ಮೃದು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದೆ. ದರ್ಶನ್ ಚಿತ್ರೀಕರಣ ನಿಲ್ಲಿಸಿ ಭಾರತಕ್ಕೆ ಆಗಮಿಸಿದ್ದಾರೆ. ಥಾಯ್ಲೆಂಡ್ -ಕಾಂಬೋಡಿಯಾ ನಡುವೆ ಕದನ ಭೀತಿ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ದಿಗ್ಭಂಧನದಂತಹ ಸಂಕಷ್ಟಗಳು ಎದುರಾಗಬಹುದು ಎಂಬ ಕಾರಣಕ್ಕಾಗಿ ದರ್ಶನ್ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಕುಂತರೂ, ನಿಂತರೂ ಸುದ್ದಿಯಾಗುವ ದರ್ಶನ್ ವಿದೇಶದಿಂದ ಆಗಮಿಸಿದಾಗಲೂ ವಿವಾದಕ್ಕೀಡಾಗಿರುವುದು ವಿಶೇಷ ಎನ್ನಿಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

4 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

5 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

5 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

6 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

7 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

7 hours ago