ರಾಜ್ಯ

ಕರ್ನಾಟಕದ ಸ್ವಸಹಾಯ ಗುಂಪು, ಸಣ್ಣ ಉದ್ಯಮಕ್ಕೆ ಸಿಗಲಿದೆ ವಾಲ್‌ಮಾರ್ಟ್‌ ಬಲ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತರಾಷ್ಟ್ರೀಯ ಖ್ಯಾತಿಯ “ವಾಲ್‌ಮಾರ್ಟ್‌” ಜೊತೆ ಒಪ್ಪಂದ ಮಾಡಿಕೊಂಡಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ “ವಾಲ್‌ಮಾರ್ಟ್‌ ವೃದ್ಧಿ” ಒಪ್ಪಂದಕ್ಕೆ ಸಹಿ ಹಾಕಿದರು.

ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು.

ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ “ಐಡಿಯಾಸ್ ಟು ಇಂಪ್ಯಾಕ್ಟ್” ಫೌಂಡೇಶನ್ ಮೂಲಕ ಸ್ವಸಹಾಯ ಗುಂಪುಗಳಿಗೆ ಉಚಿತ ಡಿಜಿಟಲ್ ಕಲಿಕೆ ತರಬೇತಿ, ವ್ಯಾಪಾರ ಪರಿಕರ ಮತ್ತು ಮಾರ್ಗದರ್ಶನ ದೊರೆಯಲಿದೆ.

ಇದನ್ನು ಓದಿ: ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಳಿವು

ಫ್ಲಿಪ್‌ಕಾರ್ಟ್ ಮತ್ತು ವಾಲ್‌ಮಾರ್ಟ್‌ ಸಂಸ್ಥೆಯ ಮಾರುಕಟ್ಟೆ ಜೊತೆ ಇ-ಕಾಮರ್ಸ್ ಸಂಪರ್ಕವನ್ನು ಸಾಧಿಸಲು ಈ ಒಪ್ಪಂದ ಅವಕಾಶ ಕಲ್ಪಿಸುತ್ತಿದೆ. ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ವ್ಯವಸ್ಥೆ, ಇ-ಕಾಮರ್ಸ್ ಮತ್ತು ಮಾರ್ಕೆಟಿಂಗ್ ಮತ್ತು ಇತರ ಸಾಮರ್ಥ್ಯಗಳಲ್ಲಿ ವಿಶೇಷ ತರಬೇತಿ ದೊರೆಯಲಿದೆ.

ಈ ಒಪ್ಪಂದದಿಂದ ಸ್ವಸಹಾಯ ಗುಂಪುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೊಸ ಮಾರುಕಟ್ಟೆಗಳಿಗೆ ಅವಕಾಶ ದೊರೆಯಲಿದೆ. ಸಾವಿರಾರು ಮಹಿಳೆಯರಿಗೆ ಉತ್ತಮ ಆದಾಯ ದೊರೆಯಲಿದೆ. ಈ ಹಿಂದೆ, ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೊರತೆಯಿತ್ತು. ವಾಲ್ಮಾರ್ಟ್ ವೃದ್ಧಿಯ ಬೆಂಬಲದೊಂದಿಗೆ, ಅವರ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿಯೂ ಪ್ರದರ್ಶಿಸಬಹುದು ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಡಾ. ಶಾಲಿನಿ ರಜನೀಶ್‌ ಮಾತನಾಡಿ, ಈ ಒಪ್ಪಂದವು ನಮ್ಮ ಕರ್ನಾಟಕದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಹೆಚ್ಚು ನೆರವಾಗಲಿದೆ. ಇಲ್ಲಿಯವರೆಗೆ, ಅವರ ಉತ್ಪನ್ನಗಳನ್ನು ಇಲಾಖಾ ಕಾರ್ಯಕ್ರಮಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ಈಗ ಇದರ ವಿಸ್ತಾರ ಹೆಚ್ಚಾಗಿದೆ. ವರ್ಷವಿಡೀ ಮಾರಾಟಕ್ಕೆ ಅವಕಾಶ ದೊರೆಯುತ್ತದೆ ಎಂದರು.

ವಾಲ್ಮಾರ್ಟ್‌ನ ಹಿರಿಯ ಉಪಾಧ್ಯಕ್ಷ ಜೇಸನ್ ಫ್ರೆಮ್‌ಸ್ಟಾಡ್ ಮಾತನಾಡಿ, ಸ್ವಸಹಾಯ ಗುಂಪುಗಳ ಉತ್ಪನ್ನಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ದೊರೆಯಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

32 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

58 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago