ರಾಜ್ಯ

ಕರ್ನಾಟಕದ ಸ್ವಸಹಾಯ ಗುಂಪು, ಸಣ್ಣ ಉದ್ಯಮಕ್ಕೆ ಸಿಗಲಿದೆ ವಾಲ್‌ಮಾರ್ಟ್‌ ಬಲ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತರಾಷ್ಟ್ರೀಯ ಖ್ಯಾತಿಯ “ವಾಲ್‌ಮಾರ್ಟ್‌” ಜೊತೆ ಒಪ್ಪಂದ ಮಾಡಿಕೊಂಡಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ “ವಾಲ್‌ಮಾರ್ಟ್‌ ವೃದ್ಧಿ” ಒಪ್ಪಂದಕ್ಕೆ ಸಹಿ ಹಾಕಿದರು.

ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು.

ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ “ಐಡಿಯಾಸ್ ಟು ಇಂಪ್ಯಾಕ್ಟ್” ಫೌಂಡೇಶನ್ ಮೂಲಕ ಸ್ವಸಹಾಯ ಗುಂಪುಗಳಿಗೆ ಉಚಿತ ಡಿಜಿಟಲ್ ಕಲಿಕೆ ತರಬೇತಿ, ವ್ಯಾಪಾರ ಪರಿಕರ ಮತ್ತು ಮಾರ್ಗದರ್ಶನ ದೊರೆಯಲಿದೆ.

ಇದನ್ನು ಓದಿ: ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಳಿವು

ಫ್ಲಿಪ್‌ಕಾರ್ಟ್ ಮತ್ತು ವಾಲ್‌ಮಾರ್ಟ್‌ ಸಂಸ್ಥೆಯ ಮಾರುಕಟ್ಟೆ ಜೊತೆ ಇ-ಕಾಮರ್ಸ್ ಸಂಪರ್ಕವನ್ನು ಸಾಧಿಸಲು ಈ ಒಪ್ಪಂದ ಅವಕಾಶ ಕಲ್ಪಿಸುತ್ತಿದೆ. ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ವ್ಯವಸ್ಥೆ, ಇ-ಕಾಮರ್ಸ್ ಮತ್ತು ಮಾರ್ಕೆಟಿಂಗ್ ಮತ್ತು ಇತರ ಸಾಮರ್ಥ್ಯಗಳಲ್ಲಿ ವಿಶೇಷ ತರಬೇತಿ ದೊರೆಯಲಿದೆ.

ಈ ಒಪ್ಪಂದದಿಂದ ಸ್ವಸಹಾಯ ಗುಂಪುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೊಸ ಮಾರುಕಟ್ಟೆಗಳಿಗೆ ಅವಕಾಶ ದೊರೆಯಲಿದೆ. ಸಾವಿರಾರು ಮಹಿಳೆಯರಿಗೆ ಉತ್ತಮ ಆದಾಯ ದೊರೆಯಲಿದೆ. ಈ ಹಿಂದೆ, ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೊರತೆಯಿತ್ತು. ವಾಲ್ಮಾರ್ಟ್ ವೃದ್ಧಿಯ ಬೆಂಬಲದೊಂದಿಗೆ, ಅವರ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿಯೂ ಪ್ರದರ್ಶಿಸಬಹುದು ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಡಾ. ಶಾಲಿನಿ ರಜನೀಶ್‌ ಮಾತನಾಡಿ, ಈ ಒಪ್ಪಂದವು ನಮ್ಮ ಕರ್ನಾಟಕದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಹೆಚ್ಚು ನೆರವಾಗಲಿದೆ. ಇಲ್ಲಿಯವರೆಗೆ, ಅವರ ಉತ್ಪನ್ನಗಳನ್ನು ಇಲಾಖಾ ಕಾರ್ಯಕ್ರಮಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ಈಗ ಇದರ ವಿಸ್ತಾರ ಹೆಚ್ಚಾಗಿದೆ. ವರ್ಷವಿಡೀ ಮಾರಾಟಕ್ಕೆ ಅವಕಾಶ ದೊರೆಯುತ್ತದೆ ಎಂದರು.

ವಾಲ್ಮಾರ್ಟ್‌ನ ಹಿರಿಯ ಉಪಾಧ್ಯಕ್ಷ ಜೇಸನ್ ಫ್ರೆಮ್‌ಸ್ಟಾಡ್ ಮಾತನಾಡಿ, ಸ್ವಸಹಾಯ ಗುಂಪುಗಳ ಉತ್ಪನ್ನಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ದೊರೆಯಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

17 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

1 hour ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

1 hour ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

2 hours ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

3 hours ago