ರಾಜ್ಯ

ಕರ್ನಾಟಕದ ಸ್ವಸಹಾಯ ಗುಂಪು, ಸಣ್ಣ ಉದ್ಯಮಕ್ಕೆ ಸಿಗಲಿದೆ ವಾಲ್‌ಮಾರ್ಟ್‌ ಬಲ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳಿಗೆ (SHGs) ಈಗ ಜಾಗತಿಕ ಮಾರುಕಟ್ಟೆಯಲ್ಲಿಯೂ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಮತ್ತು ಮಾರಾಟ ಮಾಡುವ ಅವಕಾಶ ದೊರೆತಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ಈಗ ಸ್ವಸಾಹಯ ಗುಂಪುಗಳ ಡಿಜಿಟಲ್ ಸಾಮರ್ಥ್ಯ ಹೆಚ್ಚಿಸಲು ಅಂತರಾಷ್ಟ್ರೀಯ ಖ್ಯಾತಿಯ “ವಾಲ್‌ಮಾರ್ಟ್‌” ಜೊತೆ ಒಪ್ಪಂದ ಮಾಡಿಕೊಂಡಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್ ಮತ್ತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಮಂಗಳವಾರ “ವಾಲ್‌ಮಾರ್ಟ್‌ ವೃದ್ಧಿ” ಒಪ್ಪಂದಕ್ಕೆ ಸಹಿ ಹಾಕಿದರು.

ಎನ್‌ಎಲ್‌ಎಂ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಐ2ಐ ಫೌಂಡೇಶನ್‌ನ ಟ್ರಸ್ಟಿ ಪಾರುಲ್ ಸೋನಿ ಸಹಿ ಹಾಕಿದರು.

ಈ ಒಪ್ಪಂದದ ಅವಧಿ ಮೂರು ವರ್ಷಗಳಾಗಿರುತ್ತದೆ. ವಾಲ್ಮಾರ್ಟ್ ವೃದ್ಧಿಯ ಅನುಷ್ಠಾನ ಪಾಲುದಾರರಾದ “ಐಡಿಯಾಸ್ ಟು ಇಂಪ್ಯಾಕ್ಟ್” ಫೌಂಡೇಶನ್ ಮೂಲಕ ಸ್ವಸಹಾಯ ಗುಂಪುಗಳಿಗೆ ಉಚಿತ ಡಿಜಿಟಲ್ ಕಲಿಕೆ ತರಬೇತಿ, ವ್ಯಾಪಾರ ಪರಿಕರ ಮತ್ತು ಮಾರ್ಗದರ್ಶನ ದೊರೆಯಲಿದೆ.

ಇದನ್ನು ಓದಿ: ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸುಳಿವು

ಫ್ಲಿಪ್‌ಕಾರ್ಟ್ ಮತ್ತು ವಾಲ್‌ಮಾರ್ಟ್‌ ಸಂಸ್ಥೆಯ ಮಾರುಕಟ್ಟೆ ಜೊತೆ ಇ-ಕಾಮರ್ಸ್ ಸಂಪರ್ಕವನ್ನು ಸಾಧಿಸಲು ಈ ಒಪ್ಪಂದ ಅವಕಾಶ ಕಲ್ಪಿಸುತ್ತಿದೆ. ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ವ್ಯವಸ್ಥೆ, ಇ-ಕಾಮರ್ಸ್ ಮತ್ತು ಮಾರ್ಕೆಟಿಂಗ್ ಮತ್ತು ಇತರ ಸಾಮರ್ಥ್ಯಗಳಲ್ಲಿ ವಿಶೇಷ ತರಬೇತಿ ದೊರೆಯಲಿದೆ.

ಈ ಒಪ್ಪಂದದಿಂದ ಸ್ವಸಹಾಯ ಗುಂಪುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೊಸ ಮಾರುಕಟ್ಟೆಗಳಿಗೆ ಅವಕಾಶ ದೊರೆಯಲಿದೆ. ಸಾವಿರಾರು ಮಹಿಳೆಯರಿಗೆ ಉತ್ತಮ ಆದಾಯ ದೊರೆಯಲಿದೆ. ಈ ಹಿಂದೆ, ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ಮಾರ್ಕೆಟಿಂಗ್ ಕೊರತೆಯಿತ್ತು. ವಾಲ್ಮಾರ್ಟ್ ವೃದ್ಧಿಯ ಬೆಂಬಲದೊಂದಿಗೆ, ಅವರ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿಯೂ ಪ್ರದರ್ಶಿಸಬಹುದು ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಡಾ. ಶಾಲಿನಿ ರಜನೀಶ್‌ ಮಾತನಾಡಿ, ಈ ಒಪ್ಪಂದವು ನಮ್ಮ ಕರ್ನಾಟಕದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಹೆಚ್ಚು ನೆರವಾಗಲಿದೆ. ಇಲ್ಲಿಯವರೆಗೆ, ಅವರ ಉತ್ಪನ್ನಗಳನ್ನು ಇಲಾಖಾ ಕಾರ್ಯಕ್ರಮಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ಈಗ ಇದರ ವಿಸ್ತಾರ ಹೆಚ್ಚಾಗಿದೆ. ವರ್ಷವಿಡೀ ಮಾರಾಟಕ್ಕೆ ಅವಕಾಶ ದೊರೆಯುತ್ತದೆ ಎಂದರು.

ವಾಲ್ಮಾರ್ಟ್‌ನ ಹಿರಿಯ ಉಪಾಧ್ಯಕ್ಷ ಜೇಸನ್ ಫ್ರೆಮ್‌ಸ್ಟಾಡ್ ಮಾತನಾಡಿ, ಸ್ವಸಹಾಯ ಗುಂಪುಗಳ ಉತ್ಪನ್ನಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ದೊರೆಯಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago