Categories: ರಾಜ್ಯ

ಶಾಸಕ ಯತ್ನಾಳ್‌ ಪ್ರತ್ಯೇಕ ಹೋರಾಟ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿ

ಬೆಂಗಳೂರು: ಬಿಜೆಪಿ ಶಾಸಕ ಯತ್ನಾಳ್‌ ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಪ್ರತ್ಯೇಕ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಇಂದು(ನ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಸ್ವಪ್ರತಿಷ್ಠೆಗಾಗಿ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ. ಇದು ಅವರಿಗೆ ಕ್ಷೋಭೆ ತರುವುದಿಲ್ಲ. ಬಿಜೆಪಿ ಪಕ್ಷದಲ್ಲಿ ಎಲ್ಲರೂ ಸೇರಿ ಸಂಘಟನೆಗೆ ಮನವಿ ಮಾಡಿದ್ದು, ರಾಜಾಧ್ಯಕ್ಷ ವಿಜಯೇಂದ್ರ ಸಹ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್‌ ಯಾವ ಮನವಿಗೂ ಒಪ್ಪಿಲ್ಲ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ, ಉಪಚುನಾವಣೆ ಫಲಿತಾಂಶದ ಬಗ್ಗೆ ಶಾಸಕ ಯತ್ನಾಳ್‌ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸೋಲಿಗೆ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಕಾರಣವಾಗಿದ್ದಾರೆಂಬ ಪ್ರಶ್ನೆ ಬರುವುದಿಲ್ಲ. ಇಲ್ಲಿ ಪಕ್ಷದ ಎಲ್ಲರು ಜವಾಬ್ದಾರಿ ವಹಿಸಬೇಕು. ಬಿಜೆಪಿಯಲ್ಲಿ ಏನೋ ಲೋಪವಾಗಿದೆ ಈ ಬಗ್ಗೆ ಶಾಸಕರು ಹಾಗೂ ನಾಯಕರ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

16 mins ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

47 mins ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…

53 mins ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

1 hour ago

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…

2 hours ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

3 hours ago