ಬೆಂಗಳೂರು: ಬಿಜೆಪಿ ಶಾಸಕ ಯತ್ನಾಳ್ ವಕ್ಫ್ ಆಸ್ತಿ ವಿವಾದ ವಿಚಾರವಾಗಿ ಪ್ರತ್ಯೇಕ ಹೋರಾಟಕ್ಕೆ ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ಇಂದು(ನ.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಸ್ವಪ್ರತಿಷ್ಠೆಗಾಗಿ ಪ್ರತ್ಯೇಕ ಹೋರಾಟ ಮಾಡುತ್ತಿದ್ದಾರೆ. ಇದು ಅವರಿಗೆ ಕ್ಷೋಭೆ ತರುವುದಿಲ್ಲ. ಬಿಜೆಪಿ ಪಕ್ಷದಲ್ಲಿ ಎಲ್ಲರೂ ಸೇರಿ ಸಂಘಟನೆಗೆ ಮನವಿ ಮಾಡಿದ್ದು, ರಾಜಾಧ್ಯಕ್ಷ ವಿಜಯೇಂದ್ರ ಸಹ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಯಾವ ಮನವಿಗೂ ಒಪ್ಪಿಲ್ಲ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ, ಉಪಚುನಾವಣೆ ಫಲಿತಾಂಶದ ಬಗ್ಗೆ ಶಾಸಕ ಯತ್ನಾಳ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸೋಲಿಗೆ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಕಾರಣವಾಗಿದ್ದಾರೆಂಬ ಪ್ರಶ್ನೆ ಬರುವುದಿಲ್ಲ. ಇಲ್ಲಿ ಪಕ್ಷದ ಎಲ್ಲರು ಜವಾಬ್ದಾರಿ ವಹಿಸಬೇಕು. ಬಿಜೆಪಿಯಲ್ಲಿ ಏನೋ ಲೋಪವಾಗಿದೆ ಈ ಬಗ್ಗೆ ಶಾಸಕರು ಹಾಗೂ ನಾಯಕರ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…