Categories: ರಾಜ್ಯ

ಬಿಜೆಪಿ ನಾಯಕರಿಗೆ ಯತ್ನಾಳ್‌ ಮುಖಭಂಗ ಮಾಡಲು ಹೊರಟಿದ್ದಾರೆ: ಗೃಹ ಸಚಿವ ಪರಮೇಶ್ವರ್‌ ಲೇವಡಿ

ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್‌ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ.

ವಕ್ಫ್‌ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌ ಅವರು, ನಮ್ಮ ಅವಧಿಯಲ್ಲಿ ರೈತರಿಗೆ ಹೆಚ್ಚು ವಕ್ಫ್‌ ನೋಟಿಸ್‌ ಕೊಟ್ಟಿದ್ದಾರೆ ಎಂದು ಬಿಜೆಪಿಯವರು ಪದೇ ಪದೇ ಆರೋಪ ಮಾಡುತ್ತಿದ್ದರು. ಆದರೆ ಈಗ ಸತ್ಯ ಏನು ಅಂತ ಎಲ್ಲರಿಗೂ ಗೊತ್ತಾಗಿದೆ. ಮಾಜಿ ಸಿಎಂಗಳಾದ ಬಿ.ಎಸ್.‌ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್‌ ನೀಡಲಾಗಿದೆ. ಇದಕ್ಕೆ ಬಿಜೆಪಿಯವರು ಏನು ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದರು.

ಮಾಜಿ ಶಾಸಕ ಕುಮಾರ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸುಮಾರು 2900 ಎಕರೆಗೆ ನೋಟಿಸ್‌ ನೀಡಿದ್ದಾರೆ. ನಮ್ಮ ಅವಧಿಯಲ್ಲಿ ಕೇವಲ 300 ಎಕರೆಗೆ ಮಾತ್ರ ನೋಟಿಸ್‌ ನೀಡಲಾಗಿದೆ. ಈಗಲಾದರೂ ಯಾರ ಮೇಲೆ ಆಪಾದನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ವಕ್ಫ್‌ ವಿಚಾರ ಇಟ್ಟುಕೊಂಡು ರಾಜ್ಯಾದ್ಯಂತ ಹೋರಾಟ ಮಾಡಲು ಹೊರಟಿದ್ದಾರೆ. ಅವರ ಪಕ್ಷದ ಅವಧಿಯಲ್ಲಿಯೇ ಹೆಚ್ಚು ನೋಟಿಸ್‌ ವಿಷಯ ಗೊತ್ತಾಗಿಯೇ ಯತ್ನಾಳ್‌ ಅವರು ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಿಗೆ ಮುಜುಗರ ಮಾಡಲು ಹೋರಾಟಕ್ಕೆ ಸಿದ್ಧರಾಗಿದ್ದಾರೆ ಎಂದು ಲೇವಡಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…

6 mins ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…

21 mins ago

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

1 hour ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

2 hours ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

2 hours ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

2 hours ago