ಬೆಂಗಳೂರು: ಬಿಜೆಪಿ ಆಡಳಿತದ ಸಮಯದಲ್ಲೇ ರೈತರಿಗೆ ಹೆಚ್ಚು ಹೆಚ್ಚು ವಕ್ಫ್ ನೋಟಿಸ್ ಹೋಗಿದೆ. ಈ ಮೂಲಕ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಗಳು ಬಯಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
ವಕ್ಫ್ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ನಮ್ಮ ಅವಧಿಯಲ್ಲಿ ರೈತರಿಗೆ ಹೆಚ್ಚು ವಕ್ಫ್ ನೋಟಿಸ್ ಕೊಟ್ಟಿದ್ದಾರೆ ಎಂದು ಬಿಜೆಪಿಯವರು ಪದೇ ಪದೇ ಆರೋಪ ಮಾಡುತ್ತಿದ್ದರು. ಆದರೆ ಈಗ ಸತ್ಯ ಏನು ಅಂತ ಎಲ್ಲರಿಗೂ ಗೊತ್ತಾಗಿದೆ. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್ ನೀಡಲಾಗಿದೆ. ಇದಕ್ಕೆ ಬಿಜೆಪಿಯವರು ಏನು ಹೇಳುತ್ತಾರೆ ಎಂದು ಪ್ರಶ್ನೆ ಮಾಡಿದರು.
ಮಾಜಿ ಶಾಸಕ ಕುಮಾರ ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸುಮಾರು 2900 ಎಕರೆಗೆ ನೋಟಿಸ್ ನೀಡಿದ್ದಾರೆ. ನಮ್ಮ ಅವಧಿಯಲ್ಲಿ ಕೇವಲ 300 ಎಕರೆಗೆ ಮಾತ್ರ ನೋಟಿಸ್ ನೀಡಲಾಗಿದೆ. ಈಗಲಾದರೂ ಯಾರ ಮೇಲೆ ಆಪಾದನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ವಕ್ಫ್ ವಿಚಾರ ಇಟ್ಟುಕೊಂಡು ರಾಜ್ಯಾದ್ಯಂತ ಹೋರಾಟ ಮಾಡಲು ಹೊರಟಿದ್ದಾರೆ. ಅವರ ಪಕ್ಷದ ಅವಧಿಯಲ್ಲಿಯೇ ಹೆಚ್ಚು ನೋಟಿಸ್ ವಿಷಯ ಗೊತ್ತಾಗಿಯೇ ಯತ್ನಾಳ್ ಅವರು ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಿಗೆ ಮುಜುಗರ ಮಾಡಲು ಹೋರಾಟಕ್ಕೆ ಸಿದ್ಧರಾಗಿದ್ದಾರೆ ಎಂದು ಲೇವಡಿ ಮಾಡಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…