ಮಂಡ್ಯ: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ ಮಾಡಿದೆ. ವಕ್ಫ್ ಮಂಡಳಿಯ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಈ ವಿಚಾರ ಯಾವುದೋ ಪಕ್ಷಕ್ಕೋ ಅಥವಾ ವ್ಯಕ್ತಿಗೋ ಸಂಬಂಧಿಸಿದಲ್ಲ. ಹೀಗಾಗಿ ಈಗ ಇದನ್ನು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಉಲ್ಬಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ಕೊಟ್ಟು ಕಿತ್ತುಕೊಳ್ಳುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರೈತರಿಗೆ ನೋಟಿಸ್ ಕಳುಹಿಸಿ ವಾಪಾಸ್ ತೆಗೆದುಕೊಳ್ಳುತ್ತಾರೆ ಎಂದರೆ ಏನು ಅರ್ಥ? ಸರ್ಕಾರದ ಈ ಉದ್ದೇಶವನ್ನು ಜನತೆ ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರದ ಈ ನಡವಳಿಕೆ ಖಂಡನೀಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…