Categories: ರಾಜ್ಯ

ವಕ್ಫ್‌ ಆಸ್ತಿ ವಿವಾದ: ಕಾಂಗ್ರೆಸ್‌ ಸರ್ಕಾರ ವಿರುದ್ಧ ಮಾಜಿ ಸಂಸದೆ ಸುಮಲತಾ ಕಿಡಿ

ಮಂಡ್ಯ: ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು(ನ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ ವಿವಾದ ಗಂಭೀರ ವಿಷಯವಾಗಿದ್ದು, ರೈತರ ಜಮೀನನ್ನು ವಶಪಡಿಸಿಕೊಂಡು ಅನ್ಯಾಯವಾಗುವಂತೆ ಮಾಡಿದೆ. ವಕ್ಫ್‌ ಮಂಡಳಿಯ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಈ ವಿಚಾರ ಯಾವುದೋ ಪಕ್ಷಕ್ಕೋ ಅಥವಾ ವ್ಯಕ್ತಿಗೋ ಸಂಬಂಧಿಸಿದಲ್ಲ. ಹೀಗಾಗಿ ಈಗ ಇದನ್ನು ನಿರ್ಲಕ್ಷ್ಯ ಮಾಡಿದರೆ ಮುಂದಿನ ದಿನಗಳಲ್ಲಿ ಉಲ್ಬಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ವಕ್ಫ್‌ ಆಸ್ತಿ ವಿಚಾರದಲ್ಲಿ ರೈತರಿಗೆ ಕೊಟ್ಟು ಕಿತ್ತುಕೊಳ್ಳುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರೈತರಿಗೆ ನೋಟಿಸ್‌ ಕಳುಹಿಸಿ ವಾಪಾಸ್‌ ತೆಗೆದುಕೊಳ್ಳುತ್ತಾರೆ ಎಂದರೆ ಏನು ಅರ್ಥ? ಸರ್ಕಾರದ ಈ ಉದ್ದೇಶವನ್ನು ಜನತೆ ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರ್ಕಾರದ ಈ ನಡವಳಿಕೆ ಖಂಡನೀಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

4 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago