ರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡುವೆ ಚರ್ಚೆ ಹುಟ್ಟು ಹಾಕಿದ ಸಿಎಂ ಆಡಿದ ಅದೊಂದು ಮಾತು?

ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಎಲ್ಲವೂ ಸರಿಹೋಗಿದೆ ಎನ್ನುವಷ್ಟರಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಿರುವ ಅದೊಂದೇ ಮಾತು ರಾಜ್ಯ ರಾಜಕೀಯದಲ್ಲಿ ಹಲವು ಸಂಶಯಗಳನ್ನ ಹುಟ್ಟು ಹಾಕಿದೆ.

ಮಂಗಳವಾರ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮಾಡಿ, ನಮ್ಮಿಬ್ಬರ ನಡುವೆ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಮಾಧ್ಯಮಗಳ ಮುಂದೆ ಗಟ್ಟಿಯಾಗಿ ಹೇಳಿದರು.
ಇದರ ಬೆನ್ನಲ್ಲೇ ವಿಧಾನ ಸೌಧ ಕೆಂಗಲ್ ಗೇಟ್ ಬಳಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಆಪ್ತವಾಗಿ ಆಡಿರುವ ಅದೊಂದು ಮಾತು ಕಾಂಗ್ರೆಸ್ ಪಕ್ಷದಲ್ಲಿ ಮುಂದೆ ನಡೆಯಬಹುದಾದ ವಿದ್ಯಮಾನಗಳಿಗೆ ಮುನ್ನುಡಿ ಬರೆಯುವಂತಿದೆ.

ವಿಧಾನಸೌಧ ಕೆಂಗಲ್ ಗೇಟ್ ಬಳಿ ಸಿಎಂ ಸಿದ್ದರಾಮಯ್ಯ ಶಾಸಕ ಬೇಳೂರು ಗೋಪಾಲಕೃಷ್ಣ ಜೊತೆಗಿನ ಈ ಅನೌಪಚಾರಿಕ ರಾಜಕೀಯ ಮಾತು ಸಾಕಷ್ಟು ಕುತೂಹಲ ಕೆರಳಿಸಿತು.‌ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಉದಯ ಕದಲೂರು ಜೊತೆ ವಿಧಾನಸೌಧದಿಂದ ತೆರಳುವ ವೇಳೆ ಲೋಕಾಭಿರಾಮವಾಗಿ ಮಾತನಾಡುತ್ತಾ ಪ್ರಸಕ್ತ ರಾಜಕೀಯ ವಿದ್ಯಮಾನದ ಬಗ್ಗೆ ಮಾತನಾಡಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಸಿಎಂ ಸಿದ್ದರಾಮಯ್ಯ , ರಾಜಕೀಯ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ. ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ. ಏನ್​ ಆಗುತ್ತೋ ಆಗಲಿ. ಯಾವತ್ತೂ ಯೋಚನೆ ಮಾಡಿ ಗೊತ್ತೇ ಇಲ್ಲ ನಂಗೆ. ಏನ್​ ಆಗುತ್ತೋ ಆಗಲಿ. ರಾಜಕೀಯ ನಮ್ಮಪ್ಪನ ಆಸ್ತಿನಾ? ಏನು ಆಗುತ್ತೋ ಆಗಲಿ. ರಾಜಕೀಯ ಶಾಶ್ವತ ಅಲ್ಲ ಎಂದು ವೈರಾಗ್ಯದ ರೀತಿಯಲ್ಲಿ ಮಾತನಾಡಿದರು. ಅಧಿಕಾರ ಹಂಚಿಕೆ ಚರ್ಚೆ, ಪವರ್ ಫೈಟ್ ಮಧ್ಯೆ ಸಿಎಂ ಸಿದ್ದರಾಮಯ್ಯ ಅನೌಪಚಾರಿಕವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನದ ಹಿನ್ನೆಲೆ ಈ ರೀತಿ ಶಾಸಕರ ಜೊತೆ ಸಂಭಾಷಣೆ ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ರಾಜ್ಯದಲ್ಲಿ ಪವರ್​ ಶೇರಿಂಗ್​ ಹಾಗೂ ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ ಅವರ ಬಳಗದ ಶಾಸಕರು ತಮ್ಮದೇ ಆದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ತಾವೇ ಪೂರ್ಣಾವಧಿ ಸಿಎಂ ಎನ್ನುವ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ, ಇತ್ತ ಡಿಸಿಎಂ ಡಿ ಕೆ ಶಿವಕುಮಾರ್​ ಅವರು ತಾನೂ ಸಿಎಂ ಕುರ್ಚಿಯ ಆಕಾಂಕ್ಷಿ, ಕೊಟ್ಟ ಮಾತಿನಂತೆ ತನಗೆ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರು ತನಗೆ ಬಿಟ್ಟುಕೊಡಬೇಕು ಎನ್ನುವಂತೆ ಹೇಳಿಕೆ ಕೊಡುವುದರ ಜೊತೆಗೆ ಎಕ್ಸ್​ ಪೋಸ್ಟ್​ಗಳನ್ನು ಸಹ ಮಾಡುತ್ತಿದ್ದಾರೆ.

ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಮೊದಲು ಹಾಸ್ಯದ ಲಹರಿಯಲ್ಲಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್? ಎಂದು ಪ್ರಶ್ನಿಸಿದ್ದಾರೆ. ಆದರೆ ಸಿಎಂ ಅವರ ಉತ್ತರ ಸಂಪೂರ್ಣ ಗಂಭೀರವಾಗಿತ್ತು. ರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ” ಎಂದು ಸಿಎಂ ಅಚ್ಚರಿ ಮಾತುಗಳನ್ನು ಆಡಿದ್ದಾರೆ.

ಇದನ್ನೂ ಓದಿ:-ಕಣ್ಮನ ಸೆಳೆದ ಕೃಷಿ ಪ್ರಾತ್ಯಕ್ಷಿಕೆಗಳು

ಕಳೆದ ಕೆಲವು ತಿಂಗಳುಗಳಿಂದ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ಮಾಡುತ್ತಿರುವ ಬೇಳೂರು ಗೋಪಾಲಕೃಷ್ಣ ದೆಹಲಿಯಲ್ಲಿಯೂ ಹೈಕಮಾಂಡ್‌ಗೆ ಒತ್ತಡ ಹೇರಿದ್ದರು. ಆದರೆ ಸಿಎಂ ಅವರ ಈ ಮಾತುಗಳು ಸಚಿವ ಸ್ಥಾನ ಖಾತರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನೇ ನೀಡಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ನಾನು ಯಾವತ್ತೂ ಯೋಚನೆ ಮಾಡಿ ಗೊತ್ತಿಲ್ಲ. ಏನ್ ಆಗುತ್ತೋ ಆಗಲಿ ಎಂಬ ಸಿಎಂ ಅವರ ಮಾತುಗಳು ಕೇವಲ ಬೇಳೂರಿಗಲ್ಲ, ಪಕ್ಷದೊಳಗಿನ ಎಲ್ಲ ಸಚಿವ ಸ್ಥಾನಾಕಾಂಕ್ಷಿಗಳಿಗೂ ಮತ್ತು ತಮ್ಮ ಸಿಎಂ ಕುರ್ಚಿ ವಿಚಾರವಾಗಿಯೂ ಒಂದು ಎಚ್ಚರಿಕೆಯ ಸಂದೇಶವಾಗಿದೆ ಎನ್ನಲಾಗಿದೆ.

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ, ಪವರ್​ ಶೇರಿಂಗ್​ ಪಾಲಿಟಿಕ್ಸ್​, ಸಚಿವ ಸ್ಥಾನಕ್ಕಾಗಿ ಬೇಡಿಕೆಗಳು ಇವೆಲ್ಲಾ ಭಾರೀ ಸದ್ದು ಮಾಡುತ್ತಿದೆ. ಬೇಳೂರು ಗೋಪಾಲಕೃಷ್ಣ, ರಾಜು ಕಾಗೆ, ರಾಕೇಶ್ ಪಾಟೀಲ್, ವಿನಯ್ ಕುಲಕರ್ಣಿ ಸೇರಿದಂತೆ ಹಲವು ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಇನ್ನೂ ಯಾರಿಗೂ ಭರವಸೆ ನೀಡಿಲ್ಲ, ಯಾರನ್ನೂ ನಿರಾಶೆಗೊಳಿಸಿಲ್ಲ ಎಂಬ ನಿಲುವಿನಲ್ಲಿದ್ದಾರೆ. ಇತ್ತೀಚೆಗೆ ಡಿಕೆಶಿ ಮನೆಯಲ್ಲಿ ನಡೆದ ಬ್ರೇಕ್‌ಫಾಸ್ಟ್ ಭೇಟಿ, ಅಧಿಕಾರ ಹಂಚಿಕೆ ಯುದ್ಧ, ದೆಹಲಿಯಲ್ಲಿ ನಡೆಯುತ್ತಿರುವ ಸಭೆಗಳು ಎಲ್ಲದರ ನಡುವೆಯೂ ಸಿಎಂ ಸಿದ್ದರಾಮಯ್ಯ ಹೈಕಮಾಂಡ್​ ಮಾತೇ ಅಂತಿಮ ಎಂದು ಹೇಳುತ್ತಿದ್ದಾರೆ. ಇದೀಗ ಮತ್ತೆ ಅಚ್ಚರಿ ಹೇಳಿಕೆ ಕೊಟ್ಟ ಸಿಎಂ ಏನ್ ಆಗುತ್ತೋ ಆಗಲಿ, ನಾನು ತಲೆ ಕಡೆಸಿಕೊಳ್ಳುವುದಿಲ್ಲ, ರಾಜಕೀಯ ಶಾಶ್ವತ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ರಾಜಕೀಯದಲ್ಲಿ 40 ವರ್ಷಗಳ ಅನುಭವವಿರುವ ಸಿದ್ದರಾಮಯ್ಯ ಈ ಹಿಂದೆಯೂ ನಾನು ರಾಜಕೀಯಕ್ಕೆ ಶಾಶ್ವತನಲ್ಲ, ರಾಜಕೀಯ ನನ್ನನ್ನು ಶಾಶ್ವತವಾಗಿ ಬಿಟ್ಟಿಲ್ಲ ಎಂಬ ಮಾತುಗಳನ್ನು ಹಲವು ಬಾರಿ ಹೇಳಿದ್ದಾರೆ. ಈ ಬಾರಿ ಬೇಳೂರಿಗೆ ನೇರವಾಗಿ ಹೇಳಿರುವುದು ಪಕ್ಷದೊಳಗೆ ದೊಡ್ಡ ಸಂದೇಶವಾಗಿದೆ. ಆದರೆ ಪಕ್ಷದೊಳಗೆ ಸಿಎಂ ಸಿದ್ದರಾಮಯ್ಯ ಬೇಸರಗೊಂಡಿದ್ದಾರಾ? ಎಂಬ ಚರ್ಚೆ ಆರಂಭವಾಗಿದೆ. ರಾಜಕೀಯ ಶಾಶ್ವತ ಅಲ್ಲ, ಆದರೆ ಸಿಎಂ ಅವರ ಈ ಮಾತುಗಳು ರಾಜ್ಯ ಕಾಂಗ್ರೆಸ್‌ನಲ್ಲಿ ಶಾಶ್ವತ ಚರ್ಚೆಗೆ ಕಾರಣವಾಗಲಿವೆ ಎಂಬುದರಲ್ಲಿ ಸಂದೇಹವಿಲ್ಲ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

4 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

4 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

4 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

4 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

4 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

4 hours ago